ಘಟಕಗಳು

ದೇಗುಲ ದರ್ಶನ

ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]

Read More

ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಲೋಕೇಶ್ ಕೋಟ್ಯಾನ್ ಉಪಾಧ್ಯಕ್ಷರು : ಭಾಸ್ಕರ್ ಕೋಟ್ಯಾನ್ ಕಾರ್ಯದರ್ಶಿ : ಪವಿತ್ರ ಸಂತೋಷ್ ಜತೆ ಕಾರ್ಯದರ್ಶಿ : ಲತೀಶ್ ಪೂಜಾರಿ ಕೋಶಾಧಿಕಾರಿ : ಮಧುಶ್ತೀ ಪ್ರಶಾಂತ್ ಸಂಘಟನಾ ಕಾರ್ಯದರ್ಶಿ : ಪವಿತ್ರ ಯು.ಅಮೀನ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಕ್ಷಿತ್ ಸಿ.ಎಸ್. ಪೂಜಾರಿ ಕ್ರೀಡೆ ಮತ್ತು ಸಮಾಜ ಸೇವೆ : ರೋಹಿತ್ ಸಾಹಿತ್ಯ ಮತ್ತು ಸಾಂಸ್ಕೃತಿಕ : ಶೋಭ ಕೆ.ನಾರಾಯಣ್ ಆರೋಗ್ಯ […]

Read More

ಯುವವಾಹಿನಿ ಉಡುಪಿ ಘಟಕದ ಸಭಾಂಗಣ, ಕಛೇರಿ ಉದ್ಘಾಟನೆ

ಉಡುಪಿ : ಯುವವಾಹಿನಿ ಸಂಘಟನೆಯ ಪ್ರತಿಷ್ಠಿತ ಘಟಕ ‌ಯುವವಾಹಿನಿ(ರಿ) ಉಡುಪಿ ಘಟಕದ ಯುವವಾಹಿನಿ ಸಭಾಂಗಣ ಮತ್ತು ಕಛೇರಿಯ ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಉದ್ಯಾವರ ಬಲಾಯಿಪಾದೆಯ ನಾಗಪ್ಪ ಕಾಂಪ್ಲೆಕ್ಸ್ ನಲ್ಲಿ ಮಾಲಕ ಅಶೋಕ್ ಎನ್.ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಯುವವಾಹಿನಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡುತ್ತಾ ಉಡುಪಿ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ಯುವವಾಹಿನಿ ಬೆಳವಣಿಗೆಗೆ ಉಡುಪಿ ಘಟಕದ ಸಭಾಂಗಣ ಸಹಕಾರಿಯಾಗಿದೆ. ಇದುವರೆಗೆ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಕಾರ್ಯ ನಡೆಸುತ್ತಾ […]

Read More

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) […]

Read More

ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅದ್ಭುತ , ವರ್ಣನಾತೀತ : ಶಹನಾಜ್

ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]

Read More

ವೀಲ್ ಚೇರ್ ವಿತರಣೆ

ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Read More

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ‌ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage)‌ ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]

Read More

ವೈದ್ಯಕೀಯ ನೆರವು ಹಸ್ತಾಂತರ

ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.

Read More

ಬದುಕಿನ ನಡೆ ಜ್ಞಾನದ ಹಾದಿಯಾಗಬೇಕು : ಯಶವಂತ ಪೂಜಾರಿ

ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ‌ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!