ಘಟಕಗಳು

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]

Read More

ಮುಲ್ಕಿ ಸರಕಾರಿ ಶಾಲೆಗೆ ಧನಸಹಾಯ ವಿತರಣೆ

ದಿನಾಂಕ 15.03.2018 ರಂದು ದಿ. ಸೋಮಪ್ಪ ಸುವರ್ಣ ರವರ ಸ್ಮರಣಾರ್ಥ ವಾಗಿ ಯುವವಾಹಿನಿ (ರಿ ) ಮುಲ್ಕಿ ಘಟಕದದಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ (ಬೋರ್ಡ್ ಶಾಲೆ) ಗೆ ರೂ 5000/ – ಧನಸಹಾಯ ನೀಡಲಾಯಿತು . ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಕುಬೆವೂರು , ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು . ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Read More

ಉಚಿತ ದಂತ ಚಿಕಿತ್ಸೆ ಮತ್ತು‌ ತಪಾಸಣಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]

Read More

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯುವವಾಹಿನಿ ವೇದಿಕೆ ನಿರ್ಮಿಸಿದೆ

ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]

Read More

ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆ

ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]

Read More

ಮಹಿಳೆಯರ ಸಾಧನೆ ಗಮನಾರ್ಹ : ಮಾಧವ ಸುವರ್ಣ

ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]

Read More

ಉಚಿತ ನೇತ್ರ ತಪಾಸಣಾ ಶಿಬಿರ

ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ […]

Read More

ಭೂಮಿಕಾ : ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ

ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಬಡ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕ

ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ವಿಜಯೀಭವ : ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ

ಪುತ್ತೂರು: ವಿಜಯ ಕರ್ನಾಟಕ ದಿನ ಪತ್ರಿಕೆ ಮತ್ತು ಪುತ್ತೂರು ಯುವವಾಹಿನಿ (ರಿ.) ಇವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ವಿಜಯೀಭವ ಹೆಸರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆ ರಾಜ್ಯದಾದ್ಯಂತ ಇಂಥ ಕಾರ್ಯಕ್ರಮ ನಡೆಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು. ಯುವವಾಹಿನಿ ಪುತ್ತೂರು ಘಟಕವು ಪೂರ್ಣ ಸಹಯೋಗ ನೀಡುವ ಮೂಲಕ ಕಾರ್ಯುಕ್ರಮದಲ್ಲಿ ಸಂಪೂರ್ಣ ಪಾಲು ಪಡೆಯಿತು. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಯುವವಾಹಿನಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!