11-02-2018, 3:42 PM
ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]
Read More
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
Read More
11-02-2018, 3:18 PM
ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಆವೃತ್ತಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭ ರಾಜೇಂದ್ರ, ಸಂಪತ್ ಬಿ.ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ , ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ದೀಪಕ್ ಕುಮಾರ್ […]
Read More
11-02-2018, 8:09 AM
ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]
Read More
10-02-2018, 7:05 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು
Read More
28-01-2018, 3:52 PM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]
Read More
26-01-2018, 3:52 PM
ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]
Read More
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
Read More
17-01-2018, 3:47 PM
ಯುವವಾಹಿನಿ (ರಿ) ಮಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಚಂದ್ರ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಅಮೀನ್ ಆಯ್ಕೆಯಾಗಿದ್ದಾರೆ.
Read More