01-11-2017, 7:49 AM
ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]
Read More
01-11-2017, 7:08 AM
ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು […]
Read More
22-10-2017, 4:15 PM
ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]
Read More
18-10-2017, 5:13 PM
ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]
Read More
18-10-2017, 4:48 PM
ಪುರಾಣ ಕಾಲದ ಬಲಿ ಚಕ್ರವರ್ತಿಯು ಭರತ ಭೂಮಿಯ ಕೃಷಿ ಕ್ಷೇತ್ರದ ಯಜಮಾನನಾಗಿದ್ದನು. “ಕೃಷಿತೋ ನಾಸ್ತಿ ದುರ್ಭಿಕ್ಷಂ” ಎಂಬುದು ಎರಡನೇ ಮನುವಾದ ಸ್ವಾರೋಚಿಷನ ಕಾಲದಲ್ಲಿ ವಿಶ್ವದ ಪ್ರಥಮ ಕೃಷಿಕನಾದ ಆದಿಮನಿಂದ ಹುಟ್ಟಿಕೊಂಡು ಬಲಿರಾಜನ ಕಾಲದಲ್ಲಿ ಸಂಪೂರ್ಣ ಪ್ರಗತಿಯನ್ನು ಕಂಡಿತು. ಇದರ ನಿಮಿತ್ತವಾಗಿಯೇ ಒಂದು ಕಾಲದ ತುಳುನಾಡಿನ ರೈತರು ತಮ್ಮ ಬೇಸಾಯದ ಗದ್ದೆಗಳ ಹುಣಿಗಳಲ್ಲಿ ಸಾಲು ಸಾಲಾಗಿ ದೀಪಗಳನ್ನುರಿಸಿ, ಬಲಿರಾಜನನ್ನು ಸಾಂಕೇತಿಕವಾಗಿ ಪ್ರತಿಷ್ಠಾಪಿಸಿ ದೀಪಾವಳಿಯನ್ನು ಆಚರಿಸುತ್ತಿದ್ದರು ಎಂದು ಖ್ಯಾತ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ|| ದೇಜಪ್ಪ ದಲ್ಲೋಡಿ ತಿಳಿಸಿದರು […]
Read More
18-10-2017, 2:22 PM
ಪರಸ್ಪರ ದೀಪಗಳಿಂದ ಬೆಸೆದುಕೊಂಡು ಕತ್ತಲೆಯಿಂದ ಬೆಳಕಿನೆಡೆಗೆ ಒಂದು ಅಲೌಕಿಕ ಬೆಳಕಿನ ಚಿತ್ತಾರವನ್ನು ಪೂರ್ತಿ ಬಿಡಿಸಿದಂತೆ ಕಾಣುವ ಅಥವಾ ಅದನ್ನು ಅನುಭವಿಸುವ ಅವಕಾಶವಿರುವುದು ದೀಪಗಳ ಹಬ್ಬಕ್ಕೆ ಮಾತ್ರ, ತುಳುನಾಡಿನಲ್ಲಿ ತುಡಾರ ಪರ್ಬಕ್ಕೆ ವಿಶೇಷ ಮಹತ್ವ ಇದೆ. ಕುಟುಂಬದಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು. ಅವರು ದಿನಾಂಕ 18.10.2017 ರಂದು ಉಪ್ಪಿನಂಗಡಿ ರಾಜ್ ಮಹಲ್ ಪೆದಮ್ಮಲೆ ( ವರದ್ರಾಜ್ ನಿವಾಸ) ಇಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಜರುಗಿದ ತುಡಾರ […]
Read More
15-10-2017, 4:16 PM
ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿನಾಂಕ15.10.2017 ರಂದು ಮೂರು ಬಡ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕರಾಮ್ ಎನ್ ,ಕುಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷರಾದ ಜಯನಂದ ಅಮೀನ್ ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪ ರಾಜ್, ಸಂಚಾಲಕರಾದ ಪವಿತ್ರ ಕೆ ಹಾಗೂ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಉಪಸ್ಥಿತರಿದ್ದರು.
Read More
10-10-2017, 1:39 PM
ಧನಾತ್ಮಕ ಚಿಂತನೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ, ಕೆಟ್ಟದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಸಮಾಜದಲ್ಲಿ ಗೌರವ ಅರಸಿಕೊಂಡು ಬರುತ್ತದೆ. ಎಂದು ಜೇಸಿಐ ರಾಷ್ತ್ರೀಯ ತರಬೇತುದಾರರಾದ ಅರುಣಾ ಎಸ್. ಐತಾಳ್ ತಿಳಿಸಿದರು ದಿನಾಂಕ 15.10.2017 ರಂದು ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ ,ಕೊಲ್ಯ ನಾರಾಯಣಗುರು ಸೇವಾ ಸಂಘ, ಕೊಲ್ಯ ರೋಟರಿ ಸಸಮುದಾಯ ದಳ ,ಹಾಗು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಕೊಲ್ಯ ನಾರಾಯಣಗುರು ಸಭಾಂಗಣದಲ್ಲಿ ಜರುಗಿದ ನಾಯಕತ್ವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ […]
Read More
10-10-2017, 7:59 AM
ಯುವವಾಹಿನಿ (ರಿ) ಬಜ್ಪೆ ಘಟಕದ ನೇತೃತ್ವದಲ್ಲಿ ದಿನಾಂಕ 21/10/2017ರಿಂದ 24/10/2017ರವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹದಿಂದ ಮತ್ತು ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಿವಗಿರಿ ಯಾತ್ರೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 52 ಯಾತ್ರಾರ್ಥಿಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ಚಂದ್ರಶೇಖರ್ ಪೂಜಾರಿ ಮತ್ತು ಕಾರ್ಯದರ್ಶಿ ಕನಕಾ ಮೋಹನ್, ಸಂಚಾಲಕರಾದ ದೇವರಾಜ್ ಅಮೀನ್, ಶಿವರಾಮ ಪೂಜಾರಿ ಇವರು ಶಿವಗಿರಿ ಯಾತ್ರೆಯ ನೇತ್ರತ್ವ ವಹಿಸಿದ್ದರು.
Read More
08-10-2017, 4:42 PM
ಮಹಾ ಮಾನವತಾವಾದಿ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುವರ್ಯರು ಸಮಾಜದ ಒಳಿತಿಗಾಗಿ ದುಡಿದವರು. ಸಮಸ್ತ ಮಾನವ ಜನಾಂಗಕ್ಕೆ ಹೊಸ ಹಾದಿ ತೋರಿದ ಅವರ ಸಂದೇಶದ ಅನುಷ್ಠಾನದ ಜತೆಗೆ ಅವರು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಮಂಗಳೂರಿನ ಖ್ಯಾತ ವಕೀಲರು ಹಾಗು ಕಾಂತಾವರದ ಅಲ್ಲಮ ಪ್ರಭು ಪೀಠದ ಅಧ್ಯಕ್ಷರಾದ ಶ್ರೀ ಯಶೋಧರ ಪಿ. ಕರ್ಕೇರರವರು ತಿಳಿಸಿದರು ಅವರು ಯುವವಾಹಿನಿ(ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜಯಂತಿಯ ಪ್ರಯುಕ್ತ ದಿನಾಂಕ […]
Read More