ಘಟಕಗಳು

ರಕ್ತದಾನ ಮತ್ತು ಉಚಿತ ಕಣ್ಣು ಪರೀಕ್ಷಾ ಶಿಬಿರ

ರಕ್ತದಾನ ಮಹಾದಾನ ಶ್ರೇಷ್ಠ ದಾನ ,ಇದು ಮಾನವೀಯತೆಯ ಪ್ರತೀಕ ,ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ , ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುವವಾಹಿನಿ ಮಾಣಿ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ತಿಳಿಸಿದರು. ಯುವವಾಹಿನಿ (ರಿ) ಮಾಣಿ ಮತ್ತು ಬಂಟ್ವಾಳ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆ ರಕ್ತನಿಧಿ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, […]

Read More

ಉತ್ತರ ಕರ್ನಾಟಕ ಪ್ರವಾಸ

ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]

Read More

ರಕ್ತದಾನದಿಂದ ಹಲವರ ಜೀವ ಉಳಿಸಲು ಸಾಧ್ಯ: ಸೆಬಾಸ್ಟಿನ್ ಜತ್ತನ್

ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್‌ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]

Read More

ದೇಯಿ ಬೈದೇತಿ ಮೂರ್ತಿಗೆ ಅಪಮಾನ ಪ್ರಕರಣ

ಪಡುಮಲೆಯ ದೇಯಿ ಬೈದೇತಿಯ ಔಷದ ವನದಲ್ಲಿ ದುಷ್ಕರ್ಮಿಯೊಬ್ಬ ಅಶ್ಲೀಲಕರವಾಗಿ ಚಿತ್ರೀಕರಿಸಿ ವಿಕೃತಿ ಮೆರೆದಿದ್ದಾನೆ ಮತ್ತು ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು ತುಳುನಾಡಿನ ಆರಾಧ್ಯ ದೈವ ದೇಯಿ ಬೈದೇತಿಯ ಭಕ್ತರ ಹಾಗೂ ಅಖಂಡ ಹಿಂದೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುತ್ತಾರೆ. ಈ ರೀತಿ ಧಕ್ಕೆ ತಂದಿರುವ ದುಷ್ಕರ್ಮಿ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ಸುಳ್ಯ ಪೋಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು. ಈ […]

Read More

ರಕ್ತದಾನ ಶಿಬಿರ

ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]

Read More

ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯಾತ್ರೆಯಲ್ಲಿ ಪಾನೀಯ ಸೇವೆ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 30.09.2017 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ ವಿವಿಧ ಸಾಂಸ್ಕೃತಿಕ ಕಲಾ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಪುತ್ತೂರು ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಪುಣ್ಯ ತಿಥಿಯ ಪ್ರಯುಕ್ತ ದಿನಾಂಕ 27.09.2017 ರಂದು ಪುತ್ತೂರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಜೆ ಬೇಟಿ ನೀಡಿ ಎಂಡೋ ಸಂತ್ರಸ್ತರಿಗೆ ವಿಶೇಷ ರೀತಿಯ 10 ಜೊತೆ ಶೂ ಹಾಗೂ ಊಟೋಪಚಾರದ ಕೊಡುಗೆ ನೀಡಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜ, ಜತೆ ಕಾರ್ಯದರ್ಶಿ ರವೀಂದ್ರ ಸಂಪ್ಯ, ಉಪಾಧ್ಯಕ್ಷರಾದ ಹರೀಶ್ ಶಾಂತಿ, ಮಾಜಿ ಅಧ್ಯಕ್ಷರಾದ ಬಿ.ಟಿ.ಮಹೇಶ್ ಚಂದ್ರ ಸಾಲ್ಯಾನ್, ಪ್ರಭಾಕರ ಸಾಲ್ಯಾನ್, ನಿರ್ದೇಶಕರಾದ ಸುರೇಶ್ ಸಂಪ್ಯ, ಹರೀಶ್ […]

Read More

ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆ

ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆಯಾದರು. ದಿನಾಂಕ 24.09.2017 ರಂದು ಬೆಳುವಾಯಿ ಷನ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನುಷಾ ಎಸ್.ಪೂಜಾರಿ, ಉಪಾಧ್ಯಕ್ಷರಾಗಿ ಶರತ್ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಚಂದ್ರಶೇಖರ್, ಕೋಶಾಧಿಕಾರಿ ಯಾಗಿ ಅಶೋಕ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಾಗಿ ನಿತಿನ್ ಬೆಳುವಾಯಿ, ಸೂರಜ್ ಬೆಳುವಾಯಿ, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರಾಗಿ ಸಂತೋಷ್ ನಿಡ್ಡೋಡಿ, ಸಂಜಯ್ ಪೂಜಾರಿ, ಸಮಾಜ ಸೇವಾ ನಿರ್ದೇಶಕರಾಗಿ ಮನೋಹರ್ […]

Read More

ಪ್ರೀತಿ , ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಿಸೋಣ : ಪರಮಾನಂದ ಸಾಲ್ಯಾನ್

ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ‌ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!