ಘಟಕಗಳು

ಸದೃಡ ಸಮಾಜ ನಿರ್ಮಿಸಿದ ನಾರಾಯಣಗುರುಗಳು

ಬ್ರಹ್ಮಶ್ರೀ ನಾರಾಯಣಗುರುಗಳು ತಾನು ಸಮಾಜಕ್ಕೆ ನೀಡಿದ್ದ ಪ್ರತಿ ಸಂದೇಶವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಮಾನವತಾವಾದದ ಪ್ರತಿಪಾದಕರಾಗಿದ್ದರು, ಮನುಕುಲಕ್ಕೆ ಜ್ಞಾನದ ಬೆಳಕು ತೋರಿದ ಗುರುಗಳ ಸಂದೇಶದ ಅನುಷ್ಠಾನದ ಜತೆ ಅವರು ತೋರಿಸಿದ ದಾರಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಅಗತ್ತಾಡಿ ಗರೋಡಿಯ ಶೈಲು ಬಿರ್ವ ತಿಳಿಸಿದರು ಅವರು ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜಯಂತಿ ಪ್ರಯುಕ್ತ ಯುವವಾಹಿನಿ(ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 10.09.2017 ರಂದು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ […]

Read More

ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]

Read More

ಸೋಣ ಸಂಭ್ರಮ – 2017

ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ […]

Read More

ಯುವವಾಹಿನಿ ಪ್ರೇರಕ ಶಕ್ತಿ : ಮೇಯರ್ ಕವಿತಾ ಸನಿಲ್

ಸುದೀರ್ಘ 30 ವರ್ಷಗಳ ಕಾಲ ವಿದ್ಯೆಗೆ ಪ್ರೋತ್ಸಾಹ ನೀಡುತ್ತಿರುವ ಯುವವಾಹಿನಿಯ ಅಧ್ಬುತ ಸಾಧನೆ ಶ್ಲಾಘನೀಯವಾದುದು, ಈ ನಿಟ್ಟಿನಲ್ಲಿ ಯುವವಾಹಿನಿ ಎಲ್ಲರಿಗೂ ಪ್ರೇರಕ ಶಕ್ತಿ .ನಮ್ಮ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಭಾವನೆ ನಮ್ಮಲ್ಲಿರಬೇಕು, ಪರಸ್ಪರ ಸಹಕಾರದಿಂದ ಸದೃಢ ಸಮಾಜದ ನಿರ್ಮಾಣ ಮಾಡೋಣ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರು ಮಂಗಳಾ ಮ್ಯೂಸಿಕ್ ಕ್ಲಬ್ ಹಾಗೂ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಯುವವಾಹಿನಿ […]

Read More

ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರು – ಮಾಂಬಾಡಿ

  ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರ ಸಂದೇಶ ಇಂದು ಪ್ರಸ್ತುತವಾಗಿದೆ. ಅವರ ಸಂದೇಶವನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಂಟ್ವಾಳ ನ್ಯೂಸ್ ಸಂಪಾದಕ ಹರೀಶ್ ಮಾಂಬಾಡಿ ತಿಳಿಸಿದರು.ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ನೇ ಬುಧವಾರದಂದು ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮ ದಿನಾಚರಣೆಯನ್ನು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ […]

Read More

ಸುಳ್ಯದಲ್ಲಿ ಗುರುವರ್ಯರ 163 ನೇ ಜನ್ಮದಿನಾಚರಣೆ

ಕರ್ನಾಟಕ ಸರಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ , ಯುವವಾಹಿನಿ (ರಿ) ಸುಳ್ಯ ಘಟಕ,ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ,ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಸಾರಥ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಯವರ 163ನೇ ಜಯಂತಿಯನ್ನು 6-9-2017 ನೇ ಬುಧವಾರ ಬೆಳಿಗ್ಗೆ , ಸುಳ್ಯ ತಾಲೂಕು ಪಂಚಾಯತ್ ಸಂಭಾಗಣ ,ಜೂನಿಯರ್‌ ಕಾಲೇಜು ರಸ್ತೆ ಇಲ್ಲಿ ಆಚರಿಸಲಾಯಿತು . ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ದೀಪ […]

Read More

ಬೃಹತ್ ಗುರುಸಂದೇಶ ಜಾಥಾ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಬೃಹತ್ ಗುರುಸಂದೇಶ ಜಾಥಾ ಮೆರವಣಿಗೆ ಜರುಗಿತು.ಮಂಗಳೂರು ನಗರದಲ್ಲಿ ಆಕರ್ಷಕವಾಗಿ ಸಾಗಿದ ಮೆರವಣಿಗೆ ಹಬ್ಬದ ವಾತಾವರಣ ಸೃಷ್ಟಿಸಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ‌.ಭಂಡಾರಿ ಜಾಥಾ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ರವೀಶ್ ಕುಮಾರ್, ಉಪಮೇಯರ್ ರಜನೀಶ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಂ, […]

Read More

ವಿಶೇಷ ಚೇತನ ಮಕ್ಕಳ ಜೊತೆ ಗುರುಜಯಂತಿ

ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಸಾನಿದ್ಯ ವಿಶೇಷ ಚೇತನ ಮಕ್ಜಳ ಜೊತೆ ಗುರುವರ್ಯರ ಜನ್ಮದಿನಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಸಾನಿದ್ಯದಲ್ಲಿರುವ 160 ಮಕ್ಕಳ ಯೋಗಕ್ಷೇಮ ವಿಚಾರಿಸಿದ ಕೂಳೂರು ಯುವವಾಹಿನಿ ಸದಸ್ಯರು ಅವರೊಂದಿಗೆ ಮಕ್ಜಳಂತೆ ಬೆರೆತರು.ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕುಳೂರು ಯುವವಾಹಿನಿ ಅಧ್ಯಕ್ಷರಾದ ಪುಷ್ಪರಾಜ್, ಕಾರ್ಯದರ್ಶಿ ವಿನೀತ್, ನಿಕಟ ಪೂರ್ವ ಅಧ್ಯಕ್ಷರಾದ ಸುಜಿತ್ ರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

Read More

ಗುರುವಂದನೆ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 06.09.2017ರಂದು ಗುರುವಂದನೆ ಕಾರ್ಯಕ್ರಮ ಜರಗಿತು. ಮಂಗಳೂರಿನ ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಪ್ಪಲತಾ ಹಾಗೂ ಸಿ.ಇ.ಒ ಪ್ರಭಾ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್, ನಿಕಟ ಪೂರ್ವ ಅಧ್ಯಕ್ಷರಾದ ವಿದ್ಯಾ ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು ಅಂದು ಬೆಳಗ್ಗೆ […]

Read More

ನಗರಸಭಾ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ

ಯುವವಾಹಿನಿ (ರಿ) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಪುತ್ತೂರು ನಗರಸಭೆಯ 23 ಮಂದಿ ಪೌರಕಾರ್ಮಿಕರಿಗೆ ಒಟ್ಟು 23,000/- ರೂಪಾಯಿ ವೆಚ್ಚದಲ್ಲಿ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಪುತ್ತೂರು ನಗರಸಭೆಯ ಅಧ್ಯಕ್ಷರಾದ ಜಯಂತಿ ಬಲ್ನಾಡ್, ಪೌರಾಯುಕ್ತರಾದ ರೂಪಾ ಶೆಟ್ಟಿ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಶ್ವೇತಾಕಿರಣ್, ರಾಮಚಂದ್ರ, ಚಂದ್ರಕಾಂತ್ ಶಾಂತಿವನ, ಕೇಶವ ಪೂಜಾರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!