23-01-2017, 2:14 AM
ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23.12.2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ […]
Read More
22-01-2017, 12:38 PM
ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]
Read More
22-01-2017, 12:22 PM
ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್ನ ಲಯನ್ಸ್ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]
Read More
22-01-2017, 11:42 AM
ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]
Read More
22-01-2017, 11:40 AM
ದಿನಾಂಕ 21-01-2017 ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಕೆಪಿಟಿ ಬಳಿಯ ಸರಕಾರಿ ಮಹಿಳಾ ತರಬೇತಿ ಕೇಂದ್ರದಲ್ಲಿ ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ಇವರಿಂದ ಅಣುಕು ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಡಿಸ್ಟ್ರಿಕ್ಟ್ ಫೈಯರ್ ಆಫೀಸರ್ ಪರಮೇಶ್ವರ್, ಡೆಪ್ಯುಟಿ ಕಮಾಡೆಂಟ್ ಆಫ್ ಹೋಂಗಾರ್ಡ್ ಹಾಗೂ ಐ.ಟಿ.ಐ.ನ ಪ್ರೊಫೆಸರ್ ಎ. ಬಾಲಕೃಷ್ಣ ಇವರುಗಳು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ, ಘಟಕದ ಸಲಹೆಗಾರ ಅಶೋಕ್ಕುಮಾರ್, ಮಂಗಳೂರು ಘಟಕದ ಮಾಜಿ ಅಧ್ಯಕ್ಷ […]
Read More
22-01-2017, 11:38 AM
ದಿನಾಂಕ 22-01-2017 ರಂದು ಯುವವಾಹಿನಿ(ರಿ) ಉಡುಪಿ ಘಟಕದ ನೇತೃತ್ವದಲ್ಲಿ ಮಹಿಳಾ ಸೌಂದರ್ಯವೃದ್ಧಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಎಂಬ ಮಹಿಳಾ ಕಾರ್ಯಕ್ರಮ ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮಲ್ಪೆ ಬಿಲ್ಲವ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ವಿಜಯ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಸೌಂದರ್ಯ ತಜ್ಞೆಯಾದ ವೇದಾವತಿ ಸುವರ್ಣರವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟು ಉತ್ತಮ ಮಾಹಿತಿಯನ್ನು ನೀಡಿದರು. ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿಯ ಮಹಿಳಾ ಸಂಚಾಲಕಿ ಶ್ರೀಮತಿ ಗುಣವತಿ ರಮೇಶ್ ಅತಿಥಿಗಳಾಗಿ ಭಾಗವಹಿಸಿದರು. ಯುವವಾಹಿನಿ(ರಿ) ಉಡುಪಿ […]
Read More
22-01-2017, 9:18 AM
ದಿನಾಂಕ 22-1-2017 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ಮಂಗಳೂರು, ದಿ ಕ್ರಿಶ್ಚಿಯನ್ ಎಜ್ಯುಕೇಶನ್ ಸೊಸೈಟಿ (ರಿ) ಮಂಗಳೂರು, ರೋಟರಿ ಕ್ಲಬ್ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು I.A.S. ಮಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ UPSC/KAS/IBPS ಉಚಿತ ಪ್ರೇರಣಾ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಎಸ್ಪಿ ಭೂಷಣ್ ಗುಲಾಬ್ ರಾವ್ ಬೋರಸೆ IPS ಉದ್ಘಾಟಿಸಿ, ಮಾತನಾಡುತ್ತಾ ಸೇವಾ ಮನೋಭಾವ ಇರುವವರು ಕಠಿಣ ಅಭ್ಯಾಸ, ತರಬೇತು ಪಡೆದು ಜನ ಸೇವೆ ಮಾಡುವ ಮನೋಭಾವವಿದ್ದರೆ ಮಾತ್ರ ಐ.ಎ.ಎಸ್, ಕೆ.ಎ.ಎಸ್ನಂತಹ […]
Read More
14-01-2017, 12:41 PM
ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]
Read More
14-01-2017, 11:21 AM
ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]
Read More
31-12-2016, 11:34 AM
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]
Read More