ಘಟಕಗಳು

ಕೂಳೂರು: ಮಕ್ಕಳ ದಿನಾಚರಣೆ ; ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ

ದಿನಾಂಕ 16-11-2016 ರಂದು ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಕೂಳೂರು ಘಟಕದ ಅಧ್ಯಕ್ಷ ಸುಜಿತ್‌ರಾಜ್ ಐ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಶ್ರೀಮತಿ ಐ. ಸುಶೀಲಾ ಇವರು ಮಾಹಿತಿ ನೀಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಭಾವಚಿತ್ರ ಸ್ಪರ್ಧೆಯು ಶ್ರೀಮತಿ ರೇಣುಕಾ ಪ್ರಸಾದ್ ಹಾಗೂ ಶ್ರೀಮತಿ ಪ್ರಿಯಾ ಇವರ ಸಂಚಾಲಕತ್ವದಲ್ಲಿ ಸಾಂಪ್ರದಾಯಿಕ ಸಾಮಾನ್ಯ ಹಾಗೂ ಆಧುನಿಕ ಈ ರೀತಿ ಮೂರು ವಿಭಾಗದಲ್ಲಿ ನೆರವೇರಿತು. ವಿಜೇತರಿಗೆ ಬಹುಮಾನ […]

Read More

ಪುತ್ತೂರು ಯುವವಾಹಿನಿಯ ಸಮಾಜಮುಖಿ ಕಾರ್ಯ

ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯ 161 ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಉಚಿತವಾಗಿ 6 ಫ್ಯಾನ್‌ಗಳನ್ನು 16-09-2016 ರಂದು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ದಿನಾಂಕ 3-11-2016 ರಂದು ಪುತ್ತೂರು ಘಟಕದ ವತಿಯಿಂದ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಯಕ್ಷಿತ್‌ನ ಮನೆಗೆ ತೆರಳಿ ರೂ. 5,000/-ದ ಮೊತ್ತದ ಚೆಕ್ಕನ್ನು ವಿತರಿಸುತ್ತಿರುವುದು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ನಿಕಟಪೂರ್ವ ಅಧ್ಯಕ್ಷ ಶಶಿಧರ ಕಿನ್ನಿಮಜಲು, ಕಾರ್ಯದರ್ಶಿ ಉದಯ ಕೋಲಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, […]

Read More

ಕಂಕನಾಡಿ ಯುವವಾಹಿನಿ : ಪ್ರಥಮ ಬಹುಮಾನ

ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ  ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.

Read More

ಪಡುಬಿದ್ರೆ: ಮಕ್ಕಳ ಹಬ್ಬ ಮತ್ತು ಕಲಾಭೂಷಣ ಪ್ರಶಸ್ತಿ ಪ್ರದಾನ

ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]

Read More

ಪುತ್ತೂರು ಯುವವಾಹಿನಿಯಿಂದ ಸಹಾಯ ಹಸ್ತ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಕೋಲಾಡಿ ಬಟನ್ಸ್ ಮಾಲಕ ಉದಯ ಕುಮಾರ್‌ರವರು ಕೊಡುಗೆಯಾಗಿ ನೀಡಿದ ಸುಮಾರು 18,000 ರೂ. ವೆಚ್ಚದ ಟೆಬಲ್‌ಗಳನ್ನು ಪುತ್ತೂರು ಬಿಲ್ಲವ ಸಂಘಕ್ಕೆ ಹಸ್ತಾಂತರಿಸಲಾಯಿತು.

Read More

ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ

ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]

Read More

ಕೂಳೂರು: ನಮ್ಮ ಮನೆ ಹಬ್ಬ ದೀಪಾವಳಿ

ದಿನಾಂಕ 30-10-2106 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಮ್ಮ ಮನೆ ಹಬ್ಬ ದೀಪಾವಳಿ ಎಂಬ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮವು ಘಟಕದ ಸದಸ್ಯ ಭಾಸ್ಕರ್ ಕೋಟ್ಯಾನ್‌ರವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ ಘಟಕದ ಅಧ್ಯಕ್ಷ ಐ. ಸುಜಿತ್‌ರಾಜ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಭಾಸ್ಕರ್ ಕೋಟ್ಯಾನ್‌ರವರ ಹೆತ್ತವರಾದ ಸದಾಶಿವ ಅಮೀನ್ ಮತ್ತು ಶ್ರೀಮತಿ ಜಾನಕಿ ಇವರ ಉಪಸ್ಥಿತಿಯಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿತೇಶ್ ಎಕ್ಕಾರ್ ಇವರು ದೀಪಾವಳಿ ಹಬ್ಬದ […]

Read More

ಸಾರ್ವಜನಿಕ ಸಂವಹನ ತರಬೇತಿ ಶಿಬಿರ

ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್‌ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ […]

Read More

ಕತ್ತಲಿನಿಂದ ಬೆಳಕಿಗೆ ಕೂಳೂರು ಘಟಕದ ವಿನೂತನ ಕಾರ್ಯಕ್ರಮ

ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಕಂಕನಾಡಿ ಯುವವಾಹಿನಿಯಿಂದ ಸಹಾಯ ಹಸ್ತ

ದಿನಾಂಕ 22-10-2016 ರಂದು ಕಂಕನಾಡಿ ಘಟಕದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಮಗು ರಿಶಿತ್ ಕುಮಾರ್ ಅವರಿಗೆ ಧಾನಿಗಳ ಸಹಕಾರದಿಂದ ಒಟ್ಟು ಮಾಡಿದ ರೂ. 17,000/-ದ ಚೆಕ್‌ನ್ನು ಘಟಕಾಧ್ಯಕ್ಷರು ವಿತರಿಸುತ್ತಿರುವುದು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!