05-10-2016, 5:48 AM
ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]
Read More
01-10-2016, 5:14 AM
ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]
Read More
25-09-2016, 5:36 AM
ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್ನ CEO ರತ್ನಾಕರ ಸುವರ್ಣ, ಮಾಜಿ […]
Read More
18-09-2016, 5:25 AM
ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್ಸ್ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ […]
Read More
18-09-2016, 5:19 AM
ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]
Read More
18-09-2016, 5:04 AM
ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]
Read More
16-09-2016, 5:11 AM
ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]
Read More
16-09-2016, 5:10 AM
ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.
Read More
11-09-2016, 5:19 AM
ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ. ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ
Read More
11-09-2016, 5:14 AM
ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]
Read More