ಘಟಕಗಳು

ಸಂಘಟನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಜಯಂತ್ ಪೂಜಾರಿ

ಯಡ್ತಾಡಿ: ಸಮಾಜದಲ್ಲಿ ಸಂಘಟನೆಗಳ ಅರ್ಥಪೂರ್ಣ ಕಾರ್ಯಗಳ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಯುವವಾಹಿನಿಯು ಮುಖ್ಯ ಧ್ಯೇಯಕ್ಕೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನರೇಂದ್ರ ಕುಮಾರ ಕೋಟ, ಅಂತರಾಷ್ಟ್ರೀಯ ಕ್ರೀಡಾಪಟು ಸುರೇಶ ಪೂಜಾರಿ ಸಾಸ್ತನ, […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ನಾರಾಯಣ ಗುರುವರ್ಯರ ಸಂದೇಶಗಳು ಯುವಜನತೆಗೆ ದಾರಿದೀಪ: ಉಮೇಶ್ ಎಂ. ಕರ್ಕೇರ

ಸುರತ್ಕಲ್: ಯುವಜನತೆಗೆ ದಿನನಿತ್ಯದ ಬದುಕಿನ ಬಾಳ ಬುಟ್ಟಿಯಲ್ಲಿ ನಾರಾಯಣ ಗುರುವರ್ಯರ ಜೀವನಚರಿತ್ರೆಯ ಆದರ್ಶ ಸಂದೇಶಗಳು ದಾರಿದೀಪವಾಗಿರಬೇಕು ಹಾಗೂ ಪರರಿಗೆ ಸದಾ ಒಳಿತನ್ನು ಬಯಸುವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳದ ಪ್ರಾಂಶುಪಾಲರಾದ ಉಮೇಶ್ ಎಂ. ಕರ್ಕೇರರರು ಹೇಳಿದರು. ಅವರು ಯುವವಾಹಿನಿ(ರಿ.) ಸುರತ್ಕಲ್ ಘಟಕದ 2023-2024ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ದಿನಾಂಕ 07-01-2024 ರಂದು ದೇವಾಡಿಗ ಸಭಾಭವನ ಹೊಸಬೆಟ್ಟುವಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ತಾರ ಅಶೋಕ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಹೃದಯ ತುಂಬಿದ ಅಭಿಮಾನ ಮರೆಯಲಸಾಧ್ಯ : ನಯನಾ ಸುರೇಶ್

ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು. ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು  ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]

Read More

ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ

ಬಂಟ್ವಾಳ: ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ನಾರ್ದನ್ ಸ್ಕೈ ಪ್ರಾಪಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಇವರು ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ ಮಾಡಿದರು. ಸಮಾವೇಶದ ಜನಸ್ತೋಮದ ನಡುವಣ ಬಂಟ್ವಾಳ ಅತಿಥ್ಯ ಘಟಕದ ಸಹಯೋಗದ ಸದಸ್ಯರ ಭವ್ಯ ಸ್ವಾಗತದೊಂದಿಗೆ ವಾದ್ಯ ಕೊಂಬುಗಳ ಅಬ್ಬರದ ನಿನಾದಗಳು, ಜ್ಯೋತಿ ರೂಪಕವಾಗಿ ಬೆಳಗುತ್ತಿದ್ದ ಜೋಡಿ ದೀಪಗಳು, ಪೂರ್ಣ ಕಳಸ ಹಾಗೇ ವಿವಿಧ ಹೂಗಳಿಂದ ತುಂಬಿದ್ದ ಬೃಹತ್ ಹರಿವಾಣದೊಳಗೆ ಸಜ್ಜಾಗಿದ್ದ ವರ್ಣಮಯ ಯುವಸಿಂಚನ ಹೊತ್ತಗೆಯನ್ನು ಸಮವಸ್ತ್ರಧಾರಿ ನಾರಿಮಣಿಗಳ […]

Read More

ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಒಲಿದ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಬಂಟ್ವಾಳ : ದಿನಾಂಕ 24 ಡಿಸೆಂಬರ್ 2023 ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಶುಭ ಘಳಿಗೆ ಓದಗಿಬಂತು. ಹಿಂದುಳಿದ ವರ್ಗಗಳ ಹಾಗೂ ಮೂರ್ತೆದಾರರ ಆರ್ಥಿಕ ಬೆಳವಣಿಗೆ, ಮಹಿಳಾ ಸಬಲೀಕರಣ ಹಾಗೂ ಸಮಾಜದ ಅಶಕ್ತ ಕುಟುಂಬಗಳನ್ನು ಗುರುತಿಸಿ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ವಿದ್ಯಾ ನಿಧಿ ದತ್ತುಸ್ವೀಕಾರ, ಹೀಗೆ ಹತ್ತು ಹಲವು ಮಜಲುಗಳ […]

Read More

ಕೆ.ಚಿತ್ತರಂಜನ್ ಗರೋಡಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ […]

Read More

ಯುವವಾಹಿನಿಯ ಧ್ಯೇಯವನ್ನು ವಿಭಿನ್ನವಾಗಿ ಬಿಂಬಿಸಿದ ದೃಶ್ಯ

ಮೂರು ಸ್ತಂಭಗಳಂತೆ ಯುವವಾಹಿನಿಯ ಮೂಲ ಪರಿಕಲ್ಪನೆಯ ವಿದ್ಯೆ, ಉದ್ಯೋಗ, ಸಂಪರ್ಕದ ನೆಲೆಯಲ್ಲಿ ಸದೃಢಗೊಂಡ ಆತ್ಮವಿಶ್ವಾಸದ ಭರವಸೆಯ ಬೆಳಕಿನ ಮೂರು ಹಸ್ತಕೃತಿಗಳು ಪರಿಭ್ರಮಿಸುವ ವಿಶ್ವದ ಭೂಪಟದಲ್ಲಿ ಜಗದ ಅಂಧಕಾರ ತಮವನ್ನು ಕಳೆದು ಸುಜ್ಞಾನದ ದೀವಿಗೆ ಬೆಳಗಿ ಪಸರಿಸಿದ ವಿಶ್ವಗುರು ಪರಮಪೂಜ್ಯ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಸರ್ವರು ಏಕತಾಭಾವದಿ ಒಗ್ಗಟ್ಟಾಗಿ ಸಮಾಜ ಶ್ರೇಯೋನ್ನಾತಿಗೆ ಶ್ರಮಿಸೋಣ ಎನ್ನುವ ತವಕದ ಹೆಬ್ಬಯಕೆಯ ಒಂದು ವಿಭಿನ್ನ ಕಲ್ಪನಾತೀತ ಫಲಶ್ರುತಿಗೆ. ನೈಜತೆಯ ದರ್ಶನ … ಯುವವಾಹಿನಿ ಪ್ರತಿರೂಪದ ಕೈಕನ್ನಡಿಯಂತಿರುವ ಧ್ಯೇಯವನ್ನು ಶಕ್ತಿಯುತವಾಗಿ ಕಟ್ಟಬೇಕೆಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!