10-09-2022, 4:48 PM
ಕಡಬ :- ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಯನ್ನು ಸರಸ್ವತಿ ವಿದ್ಯಾಲಯ ಶಾಲೆ ಕಡಬ ಇಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಲ್, ಶಿವಪ್ರಸಾದ್ ನೂಚಿಲ ಸಂಘಟನಾ ಕಾರ್ಯದರ್ಶಿ ಕೇಂದ್ರ ಸಮಿತಿ ಮಂಗಳೂರು, ಕೃಷ್ಣಪ್ಪ ಅಮೈ ಕಾರ್ಯದರ್ಶಿ, ಮತ್ತು ಶಾಲೆಯ ಮುಖ್ಯಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗುರುಗಳ ತತ್ವವನ್ನು ಘಟಕದ ಅಧ್ಯಕ್ಷರು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಮಕ್ಕಳಿಗೆ ತಿಳಿಸಿಕೊಟ್ಟರು, ಶಾಲೆಯಲ್ಲಿ ಸೇರಿದ ಎಲ್ಲ ಮಕ್ಕಳಿಗೆ ನಮ್ಮ ಘಟಕದ ವತಿಯಿಂದ ಗುರುಗಳ […]
Read More
10-09-2022, 4:41 PM
ಕೊಲ್ಯ :- ಬ್ರಹ್ಮಶ್ರೀ ನಾರಾಯಣಗುರುಗಳ 168 ನೇ ಜನ್ಮದಿನಾಚರಣೆಯ ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಅಭಯ ಆಶ್ರಯ ಅಸೈಗೋಳಿಯಲ್ಲಿ, ನಾರಾಯಣಗುರುಗಳ ತತ್ವ ಮತ್ತು ಸಂದೇಶಗಳಲ್ಲಿ ಒಂದಾಗಿರುವ ಪರಿಸರವನ್ನು ರಕ್ಷಿಸಿ ಅದು ನಿಮ್ಮನ್ನು ರಕ್ಷಿಸುತದೆ ಎನ್ನುವುದಕ್ಕೆ ಪೂರಕವಾಗಿ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ಕೆಲವೊಂದು ಗಿಡಗಳನ್ನು ನೆಡಲಾಯಿತು. ಅಭಯ ಆಶ್ರಯದ ಪದಾಧಿಕಾರಿಗಳು, ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ , ಪದಾಧಿಕಾರಿಗಳು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಬ್ರಹ್ಮಶ್ರೀ ನಾರಾಯಣಗುರು ತತ್ವ ಮತ್ತು […]
Read More
10-09-2022, 4:33 PM
ಕಡಬ:- ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆಯ ಪ್ರಯುಕ್ತ ಕಡಬ ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗೊಳಿಯಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕಟ್ಟತಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ಗುರು ಮಂದಿರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿ ಕೊಂಡಿದ್ದ ಶಶಿಧರ್ ಮನೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ […]
Read More
10-09-2022, 4:08 PM
ಕುಪ್ಪೆಪದವು:- ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಅಂಗವಾಗಿ ಗುರು ನಮನ ಸಲ್ಲಿಸಲಾಯಿತು. ನಾಗಂದಡಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ರಾದ ಜಗದೀಶ್ ದುರ್ಗಾಕೊಡಿ, ಸ್ಥಾಪಕ ಅಧ್ಯಕ್ಷ ರಾದ ಅರುಣ್ ಕುಮಾರ್ ಅಂಬೇಲೋಟ್ಟು , ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್ ಹಾಗೂ ಪದಾಧಿಕಾರಿಗಳು ಮತ್ತು ಘಟಕದ ಸದಸ್ಯರುಗಳು ಉಪಸ್ಥಿತರಿದ್ದರು.
Read More
10-09-2022, 2:36 PM
ಕೊಲ್ಯ :- ಅಭಯ ಆಶ್ರಯ ಅಸೈಗೋಳಿ ಇದರ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಸಾಕಾರಗೊಂಡ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168 ನೆಯ ಜನ್ಮ ದಿನಾಚರಣೆಯು ವಿಶ್ವ ಬಿಲ್ಲವರ ಸೇವಾ ಚಾವಡಿ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ತಾರೀಕು 10 ಸೆಪ್ಟೆಂಬರ್ 2022ನೇ ಶನಿವಾರ ಸಂಜೆ ಅಸೈಗೊಳಿ ಅಭಯಾಶ್ರಯದ ಪ್ರಶಾಂತವಾದ ತಾಣದಲ್ಲಿ ಇತ್ತೀಚೆಗೆ ನೂತನವಾಗಿ ಲೋಕಾರ್ಪಣೆಗೊಂಡ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಆಶ್ರಮದ ಹಿರಿಯ ಸದಸ್ಯರ ಸಮಕ್ಷಮದಲ್ಲಿ ಬ್ರಹ್ಮ ಶ್ರೀ ನಾರಾಯಣ […]
Read More
10-09-2022, 2:14 PM
ಪುತ್ತೂರು :- ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆಯ, ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಪುತ್ತೂರು ಬಿಲ್ಲವ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಧ್ಯಾಹ್ನದ ಅನ್ನ ಪ್ರಸಾದ ಭೋಜನದ ವ್ಯವಸ್ಥೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕಕ್ಕೆ ನೀಡಿದ್ದು ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಮಧ್ಯಾಹ್ನದ ನಂತರ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ವಿಠಲ್ ನಾಯಕ್ ಕಲ್ಲಡ್ಕ ಇವರ ತಂಡದಿಂದ ಮನರಂಜನಾ ಕಾರ್ಯಕ್ರಮ ಗೀತ […]
Read More
08-09-2022, 9:21 AM
ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, […]
Read More
05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
Read More
05-09-2022, 3:20 PM
ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]
Read More
05-09-2022, 3:12 PM
ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]
Read More