ಘಟಕಗಳು

20ನೇ ವರ್ಷದ ಆಟಿಡೊಂಜಿ ದಿನ

ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]

Read More

ಶ್ರೀ ಗೋಕರ್ಣನಾಥ ಕ್ಷೇತ್ರ ಭಜನಾ ಸಂಕೀರ್ತನೆ

ಮಂ ಮಂಗಳೂರು  :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]

Read More

ಸೇಸಪ್ಪ ಕೋಟ್ಯಾನ್ ದಂಪತಿಗಳಿಗೆ ಅಭಿನಂದನೆ

ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ದಿನಾಂಕ‌ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ […]

Read More

ಯುವವಾಹಿನಿ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ : ಉದಯ ಅಮೀನ್ ಮಟ್ಟು

 ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ […]

Read More

ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]

Read More

ಬೆಳ್ಳಿ ಬೆಳಕು – 2022, 25ರ ಸಂಭ್ರಮ

ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]

Read More

ಪರಿಸರ ದಿನಾಚರಣೆ

ಸುರತ್ಕಲ್ :- ದಿನಾಂಕ 08 ಜುಲೈ 2022 ರಂದು ಘಟಕದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಮ್ಮ ಘಟಕದ ಸದಸ್ಯೆಯಾದ ಗಾಯತ್ರಿ ಸತೀಶ್ ರವರು ಪರಿಸರ ಉಳಿಸಿ ಗಿಡ ಬೆಳೆಸಿ ಎಂಬುದರ ಮೂಲಕ ಪರಿಸರ ದಿನಾಚರಣೆಯ ಬಗ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷರಾದ ಶ್ರೀ ಯೋಗೀಶ್ ಸನಿಲ್ ರವರು ಸದಸ್ಯರೆಲ್ಲರಿಗೂ ಗಿಡಗಳನ್ನು ವಿತರಿಸಿ ಇನ್ನು ಮುಂದೆಯೂ ಇಂತಹ ಒಳ್ಳೊಳ್ಳೆ ಕಾರ್ಯಕ್ರಮಗಳನ್ನು […]

Read More

ಸಹಾಯಧನ ವಿತರಣೆ

ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

Read More

ವಿಶೇಷ ತರಭೇತಿ ಶಿಬಿರ

ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ […]

Read More

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!