25-05-2019, 8:11 AM
ಯಡ್ತಾಡಿ : ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ ಕಾರ್ಯಕ್ರಮ ದಿನಾಂಕ 25/05/2019 ರ ಶನಿವಾರ ಕಂಬಳಕಟ್ಟು ಸತೀಶ ಪೂಜಾರಿಯವರ ಮನೆಯಲ್ಲಿ ಜರಗಿತು…ಈ ಕಾರ್ಯಕ್ರಮ ಈ ಹಿಂದೆ ನಡೆದ ನಮ್ಮ ನಡೆ ಕಾರ್ಯಕ್ರಮಗಳಿಗಿಂತ ವಿಭಿನ್ನ ವಾಗಿ ಮೂಡಿ ಬಂದಿತ್ತು ….ನಮ್ಮ ಯುವವಾಹಿನಿ ಸದಸ್ಯರ ಪುಟಾಣಿ ಮಕ್ಕಳೇ ನಿರೂಪಣೆ ಮಾಡಿ ಆಯೋಜಿಸಿದ್ದು ಮಕ್ಕಳೇ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ವಿಶೇಷವಾಗಿತ್ತು..ಯುವವಾಹಿನಿ ಸದಸ್ಯರೆಲ್ಲರೂ ಆಟೋಟ ಕಾರ್ಯಕ್ರಮ ಹಾಗು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಮಕ್ಕಳೊಂದಿಗೆ ಬೆರೆತು ಹಿರಿಯರು ಕಿರಿಯರು ಎಲ್ಲರೂ ಖುಷಿಯಿಂದ […]
Read More
23-05-2019, 4:01 PM
ಬಂಟ್ವಾಳ : ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್ ಬತ್ತನಾಡಿ ಅವರು ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಸುಪುತ್ರ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದ ಕೌಶಿಕ್ ಜಪಾನ್ ದೇಶಕ್ಕೆ ತೆರಳುವ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ಶಾಲು ಹೊದಿಸಿ, ಅಭಿನಂದಿಸಿ, ಶುಭಹಾರೈಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, […]
Read More
12-05-2019, 3:05 PM
ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
Read More
12-05-2019, 7:53 AM
ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]
Read More
12-05-2019, 7:49 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]
Read More
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
Read More
12-05-2019, 7:09 AM
ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ
Read More
10-05-2019, 12:18 PM
ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]
Read More
08-05-2019, 4:22 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]
Read More
08-05-2019, 4:01 AM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]
Read More