ಘಟಕಗಳು

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]

Read More

ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಡಿ,ನಲಿದು ಸಂಭ್ರಮಿಸಿದ ಯುವಜನತೆ

ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ  ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]

Read More

ಕೆ ವಸಂತ ಬಂಗೇರರಿಂದ ಯುವವಾಹಿನಿ ಸಾಂತ್ವಾನ ನಿಧಿ ಹಸ್ತಾಂತರ

ಬೆಳ್ತಂಗಡಿ : ಮೂಂಡೂರು ಗ್ರಾಮದ ಪರನೀರು ಯೋಗೀಶ್ ಯಾನೆ ಗೋಪಾಲ್ ಇವರು ಬಸ್ ಅಪಘಾತಕ್ಕಿಡಾಗಿ ಬಲ ಕಾಲನ್ನು ಕಳೆದುಕೊಂಡಿದ್ದು ಇವರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಅತಿಥಿಗಳು ಹಾಗೂ ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಮತ್ತು ಮಾಜಿ ಶಾಸಕರಾದ ಕೆ ವಸಂತ ಬಂಗೇರರು ನೀಡಿದ 10000.00 ಮೊತ್ತವನ್ನು ಒಟ್ಟು ಸೇರಿಸಿ 50000.00 ರೂಪಾಯಿ ಸ್ವಾಂತ್ವನ ನಿಧಿಯನ್ನು ದಿನಾಂಕ 18.12.2018 ರಂದು ಮಾಜಿ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಯುವವಾಹಿನಿ ಸಂಘಟನೆಯು […]

Read More

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಗ್ರಾಮ ಮಟ್ಟದಿಂದಲೇ ನಾಯಕರನ್ನಾಗಿಸುವಲ್ಲಿ ಪ್ರೋತ್ಸಾಹಿಸೋಣ.: ಯೋಗೀಶ್ ಕುಮಾರ್ ಅಗತ್ತಾಡಿ.

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ಹಳೆನೇರಂಕಿ ಗ್ರಾಮದ ನಾರಾಯಣ ಸಾಂತ್ಯ ಇವರ ಮನೆಯಲ್ಲಿ ದಿನಾಂಕ 16.12.2018 ರಂದು ನಡೆದ “ಗುರುಸ್ಪೂರ್ತಿ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಯೋಗೀಶ್ ಕುಮಾರ್ ಅಗತ್ತಾಡಿಯವರು, ಗ್ರಾಮ ಮಟ್ಟದಿಂದಲೆ ನಮ್ಮ ಸಮಾಜ ಬಾಂಧವರನ್ನು ನಾಯಕರಾಗಿಸುವಲ್ಲಿ ಪ್ರೋತ್ಸಾಹ ನೀಡೋಣ ಎಂದು ತಿಳಿಸಿದರು. ಮನೆಯ ಹಿರಿಯರಾದ ಬಾಳಪ್ಪ ಪೂಜಾರಿ ಸಾಂತ್ಯ ಕಾರ್ಯಕ್ರಮ ಉಧ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಆಲಂಕಾರು – ನಾರಾಯಣ ಗುರುಗಳ […]

Read More

ವಿಶುಕುಮಾರ್ ಪರಿಚಯ ಕಾರ್ಯಕ್ರಮ

ಬೆಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಹಾಗು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಇದರ ಆಶ್ರಯದಲ್ಲಿ ಸರಣಿ ಕಾರ್ಯಕ್ರಮವಾದ ವಿಶುಕುಮಾರ್ ಪರಿಚಯ ಕಾರ್ಯಕ್ರಮವನ್ನು ದಿನಾಂಕ 16-12-2018 ರಂದು ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕರ್ ಸುವರ್ಣರವರು ವಿಶುಕುಮಾರ್ ಅವರ ಸಾಹಿತ್ಯ, ಕಾದಂಬರಿ, ಸಿನಿಮಾ ಕ್ಷೇತ್ರದ ಸಾಧನೆಯನ್ನು ಘಟಕದ ಸದಸ್ಯರಿಗೆ ಪರಿಚಯಿಸಿದರು. ನ್ಯಾಯವಾದಿ ನವನೀತ್ ಹಿಂಗಾಣಿ ವಿಶುಕುಮಾರ್ ಬದುಕು ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!