16-12-2018, 1:38 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 16-12-2018 ರಂದು ಬೆಳಿಗ್ಗೆ 9.30 ಕೆ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ, ಸಮಾಜಸೇವಾ ನಿರ್ದೇಶಕರಾಗಿರುವ ರಘು ಕೋಟ್ಯಾನ್ ಇವರ ಸಾರಥ್ಯದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು, ಶಾಲಾ ಆವರಣದ ಸುತ್ತ ಮುತ್ತವಿದ್ದ ಪ್ಲಾಸ್ಟಿಕ್ ಹಾಗು ಇನ್ನಿತರ ಒಣ ಕಸ ಮತ್ತು ಹಸಿ ಕಸಗಳನ್ನು ವಿಂಗಡಿಸಲಾಯಿತು, ಸ್ವಚ್ಚತಾ ಕಾರ್ಯಕ್ರಮಗಳ ಜೊತೆ ಶಾಲೆಯ ಪರಿಸರಕ್ಕೆ ಅನುಕೂಲಕರವಾಗುವ ಹಾಗೆ […]
Read More
16-12-2018, 1:03 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ, ಲಯನ್ಸ್ ಕ್ಲಬ್ ವೇಣೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ದಿನಾಂಕ 16.12.2018 ರಂದು ಆದಿತ್ಯವಾರ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಆಯುಷ್ ವೈದ್ಯರಾದ ಡಾ.ಕೃಷ್ಣಪ್ರಸಾದ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯ […]
Read More
15-12-2018, 1:37 PM
ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]
Read More
13-12-2018, 3:58 PM
ಎಕ್ಕಾರು ಪೆರ್ಮುದೆ : ಮನನೊಂದ ಅಶಕ್ತ ಸಮಾಜ ಬಾಂಧವರ ಸಹಾಯಕ್ಕೆ ಸದಾ ಸಿದ್ದ ಎನ್ನುವ ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ ಘಟಕವು ತನ್ನ ಧ್ಯೇಯ ವಾಕ್ಯದಂತೆ ಮತ್ತೊಂದು ನೊಂದ ಬಡ ಮನಸ್ಸಿಗೆ ತನ್ನ ಸಹಾಯ ಹಸ್ತವನ್ನು ನೀಡಿರುತ್ತದೆ ಮೂಡಿಗೆರೆಯ ಸುರೇಶ್ ಇವರು ಕಳೆದ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ನಗರದ ಎ.ಜೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಮೂಲತಃ ಬಡ ಕುಟುಂಬದವರಾಗಿದ್ದು, ಅವಿವಾಹಿತರಾಗಿದ್ದು ತನ್ನ ತಂದೆಯನ್ನೂ ಕಳೆದುಕೊಂಡಿರುತ್ತಾರೆ. ಇವರ ಚಿಕಿತ್ಸೆಗೆ ಹಣ ಹೊಂದಿಸಲು ಇವರ ಸಹೋದರಿ ಸುಮ ಇವರು ಕಷ್ಟ […]
Read More
11-12-2018, 3:35 PM
ಬೆಳ್ತಂಗಡಿ: ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ಸಂಚಾಲನ ಸಮಿತಿ ಓಡಿಲ್ನಾಳ ಇದರ ವತಿಯಿಂದ ಬೈನ್ ಹ್ಯಾಮರೇಜ್ಗೆ ತುತ್ತಾಗಿ ಕೋಮಾ ಸ್ಥಿತಿಯಲ್ಲಿ ಕೆಎಂಸಿ ಹಾಸ್ಪಿಟಲ್ನಲ್ಲಿ ಕಳೆದ 25 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿರುವ ಚಂದ್ರಶೇಖರ ಪೂಜಾರಿ ಸುದೆಬೈಲು ಓಡಿಲ್ನಾಳ ಇವರಿಗೆ ರೂಪಾಯಿ 15,750.00 ಸ್ವಾಂತ್ವನ ನಿಧಿಯನ್ನು ಚಂದ್ರಶೇಖರ್ ಪೂಜಾರಿ ಇವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಸಂಚಾಲನ ಸಮಿತಿಯ ಕಾರ್ಯದರ್ಶಿ ನಾಗೇಶ್ ಓಡಿಲ್ನಾಳ, ಘಟಕದ ಸಲಹೆಗಾರರದ ರಮಾನಂದ ಸಾಲಿಯಾನ್ […]
Read More
09-12-2018, 3:38 PM
ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]
Read More
09-12-2018, 3:01 PM
ಬಜಪೆ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]
Read More
09-12-2018, 2:53 PM
ಬಜಪೆ : ಸಮಾಜ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) […]
Read More
08-12-2018, 8:52 AM
ಬೆಳ್ತಂಗಡಿ : ಶಾಂತ ಸ್ವಭಾವದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗುಹೋಗುಗಳ ಘಟನೆಗಳನ್ನು ಒಂದು ಚೌಕಟ್ಟಿನಲ್ಲಿ ಬರಹದ ರೂಪಕ್ಕೆ ತಂದರು ಅವರ ಬರಹ ತೀಕ್ಷ್ಣತೆ ಹಾಗೂ ನಿರ್ಭೀತಿಯಿಂದ ಕೂಡಿತ್ತು ಅವರು ಯಾರ ಮುಲಾಜಿಗೂ ಒಲಿಯುತ್ತಿರಲಿಲ್ಲ ತಮಗೆ ಅನಿಸಿದ್ದನ್ನು ಬರೆಯುತ್ತಿದ್ದರು. ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ್ ತಿಳಿಸಿದರು. ಅವರು ಶಾರದಾ ಮಂಟಪ ಗುರುವಾಯನಕೆರೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ […]
Read More
07-12-2018, 4:04 PM
ಯಡ್ತಾಡಿ : ಬದುಕು ಒಂದೊಮ್ಮೆ ತೀರಾ ಸಂಕಷ್ಟಕ್ಕೆ ತುತ್ತಾಗುತ್ತದೆ. ಕಷ್ಟ ಬಂದವರಿಗೆ ಮರಳಿ ಮರಳಿ ನೋವು ಬರುತ್ತೆ. ಯಡ್ತಾಡಿ ಗ್ರಾಮದಲ್ಲಿ ವಾಸವಾಗಿರುವ ಸ.ಹಿ.ಪ್ರಾ. ಶಾಲೆ ಯಡ್ತಾಡಿಯ 7ನೇ ತರಗತಿ ವಿದ್ಯಾರ್ಥಿ ರಾಜೇಂದ್ರ ಎಂಬ ಹುಡುಗನ ಕರುಣಾಜನಕ ಕಥೆ ಇದು. ಕಡು ಬಡತನದಲ್ಲಿ ಹುಟ್ಟಿದ ಈ ಹುಡುಗನಿಗೆ ಹುಟ್ಟಿನಿಂದಲೇ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೂ ಚಿಕಿತ್ಸೆಯ ಮೂಲಕ ಒಂದೇ ಕಿಡ್ನಿಯಲ್ಲಿ ಲವ ಲವಿಕೆಯ ಜೀವನ ಸಾಗಿಸುತ್ತಿದ್ದ. ಆದರೆ ಇತ್ತೀಚಿಗೆ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿ ಹಲವಾರು ದಿನಗಳಿಂದ […]
Read More