ಘಟಕಗಳು

ಯುವಕರು ಉದ್ಯೋಗ ಹುಡುಕುವವರಾಗಬಾರದು,ಇತರರಿಗೆ ಉದ್ಯೋಗ ಒದಗಿಸುವವರಾಗಬೇಕು : ಸುಧಾಕರ ಕಾರ್ಕಳ

ಕಡಬ : ಯುವವಾಹಿನಿ (ರಿ) ಕಡಬ ಘಟಕ ರಾಷ್ಟ್ರೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಆಲಂಕಾರು, ಕಡಬ ಮತ್ತು ಮರ್ಧಾಳ ವಲಯ ಇದರ ಆಯೋಜನೆಯಲ್ಲಿ ದಿನಾಂಕ 16/09/2018 ನೇ ಆದಿತ್ಯವಾರ ದಂದು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನ ಕಡಬದಲ್ಲಿ ” ಜೀವನೋತ್ಸಹ-2018″ ಎಂಬ ಬಿಲ್ಲವ ಯುವ ಜನತೆಗೆ ತರಬೇತಿ ನೀಡುವ ವಿನೂತನ ಕಾರ್ಯಕ್ರಮ ನಡೆಯಿತು. ಎನ್ ಮುತ್ತಪ್ಪ ಪೂಜಾರಿ ನೈಯಲ್ಗ ನಿವೃತ್ತ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಿ.ಎ ಬ್ಯಾಂಕ್ ಆಲಂಕಾರು […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಶಿವಗಿರಿಯಾತ್ರೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]

Read More

ಭಜನೆಯಿಂದ ವಿಭಜನೆಯಿಲ್ಲ : ಕೃಷ್ಣಪ್ಪ ಪೂಜಾರಿ

ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]

Read More

ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಕಂಕನಾಡಿ : ಯುವವಾಹಿನಿ(ರಿ‌.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು    ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ  ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ  ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]

Read More

ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ

ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]

Read More

ಯುವಸಿಂಚನ : ಸೆಪ್ಟೆಂಬರ್ ಸಂಚಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ‌ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ‌ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]

Read More

ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ : ಮಧುಮಾಲ

ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು. ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ವೈದ್ಯಕೀಯ ನೆರವು

ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Read More

ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಟೋಟ ಸ್ಪರ್ಧೆ

ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್‌ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!