29-07-2018, 4:25 PM
ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]
Read More
29-07-2018, 4:15 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ 29.07.2018 ರಂದು ಪಡುಬಿದ್ರಿ ಬಿಲ್ಲವ ಸಂಘದ ಪರಿಸರದಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಕಾರ್ಯದರ್ಶಿ ಶೈಲಜಾ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
29-07-2018, 4:05 PM
ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]
Read More
29-07-2018, 3:21 PM
ಕಾಪು : ತುಳುವರ ಆಚರಣೆ, ಸಂಪ್ರಧಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ(ರಿ) ಕಾಪು ಘಟಕದ ವತಿಯಿಂದ ದಿನಾಂಕ 29.08.2018 ರಂದು ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ […]
Read More
29-07-2018, 6:25 AM
ಕೂಳೂರು : ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ತುಳುನಾಡಿನ ಸಂಸ್ಕೃತಿ ,ಸಂಪ್ರದಾಯ ಹಾಗೂ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ರವಾನಿಸಬಹುದು, ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಇದರ ಸ್ಥಾಪಕ ಅಧ್ಯಕ್ಷರಾದ ಕೆಎ ರೋಹಿಣಿತಿಳಿಸಿದರು. ಆಗಿನ ಕಾಲದಲ್ಲಿ ಹೆತ್ತವರು ಹೇಳಿದಂತೆ ಮಕ್ಕಳು ಕೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಮಕ್ಕಳು ಹೇಳಿದಂತೆ ಹೆತ್ತವರು ಕೇಳಬೇಕಾದ ಪರಿಸ್ಥಿತಿ , ಆಟಿ ತಿಂಗಳಿನ ವಿಶೇಷತೆ ,ಅಮಾವಾಸ್ಯೆ ಬಡಿಸುವುದು ,ಆಟಿ ಕಳಂಜ […]
Read More
29-07-2018, 2:10 AM
ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ […]
Read More
29-07-2018, 2:05 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕದಿಂದ ವಂಚನೆಗೊಂಡಿದ್ದ ಮೂಡುಕೋಡಿ ಹೊಸಮನೆ ದೋಟ ಸುಶೀಲ ರವರ ಮನೆಗೆ 20,000/- ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಮಾಡಿಕೊಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ಜಯಂತ ನಡುಬೈಲು ವಿದ್ಯುತ್ ಸಂಪರ್ಕ ಉದ್ಘಾಟನೆ ಮಾಡಿದರು .ಇದೇ ಮನೆಯ ಸುಶೀಲಾರ ಮಗ ಸಚಿನ್ ಮನೊರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಘಟಕದ ವತಿಯಿಂದ 7,000 /-ರೂಪಾಯಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ […]
Read More
29-07-2018, 2:02 AM
ಮಂಗಳೂರು : ನಗರಕ್ಕೆ ಹಸಿರ ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ ಹೆಗ್ಡೆ ತಿಳಿಸಿದರು. ಅವರು ದಿನಾಂಕ 29.07.2018 ರಂದು ಲಯನ್ಸ್ ಮತ್ತು ಲಯನೆಸ್ ಕ್ಲಬ್ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಉರ್ವಾಸ್ಟೋರ್ ನಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ನಾಗವೇಣಿ ,ಸ್ಥಾಯಿ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ, […]
Read More
25-07-2018, 3:48 PM
ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಕೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದಿನಾಂಕ 25/07/2018 ರಂದು ಸಂಜೆ 7 ಗಂಟೆಗೆ ಸರಿಯಾಗಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು . ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ್ ಪೂಜಾರಿ ,ಸಲಹೆಗಾರರಾದ ನೇಮಿರಾಜ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷರಾದ ಜಯಾನಂದ ಅಮೀನ್, ಗೋಪಾಲಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾದ ಗಿರಿಧರ್ ಗಿರಿಧರ್ ಸನಿಲ್, […]
Read More
22-07-2018, 6:26 PM
ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]
Read More