ಘಟಕಗಳು

ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]

Read More

ಸ್ವಚ್ಛತೆ ಹಾಗೂ ವನಮಹೋತ್ಸವ

ಕೆಂಜಾರು ಕರಂಬಾರು : ಯುವವಾಹಿನಿ (ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ .08/07/2018 ಆದಿತ್ಯ ವಾರ ಕರಂಬಾರು ಶ್ರೀ ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ಸದಸ್ಯರು ದೈವಸ್ಥಾನದ ಅಂಗಣವನ್ನು ಸ್ವಚ್ಚ ಗೊಳಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್ ಗಿಡ ನೆಡುವುದರೊಂದಿಗೆ ವನಮಹೋತ್ಸಕ್ಕೆ ಚಾಲನೆ ನೀಡಿದರು. ಸುಮಾರು 50 ವಿವಿಧ ಗಿಡಗಳನ್ನು ನೆಡಲಾಯಿತು ಹಾಗೂ ಸದಸ್ಯರಿಗೆ ಗಿಡಗಳನ್ನು ವಿತರಿಸಲಾಯಿತು. ದೈವಸ್ಥಾನದ ಅರ್ಚಕ ರುಕ್ಕಯ್ಯ ಪಾತ್ರಿ, ಘಟಕದ ಅಧ್ಯಕ್ಷ ಗಣೇಶ್ ಅರ್ಬಿ, […]

Read More

ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ ವಿಚಾರ ಸಂಕಿರಣ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]

Read More

ಮನೆ ಮನ ಬೆಳಗಿದ ಗುರುಸ್ಪೂರ್ತಿ

ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]

Read More

ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣ : ಯಶವಂತ ಪೂಜಾರಿ

ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]

Read More

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]

Read More

ದ್ವನಿವರ್ದಕದ ಕೊಡುಗೆ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು  ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು

Read More

ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು‌ ದಿನಾಂಕ‌ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]

Read More

ವಿಶ್ವ ಯೋಗ ದಿನಾಚರಣೆ

ಉಡುಪಿ : ಯುವವಾಹಿನಿ ಉಡುಪಿ ಘಟಕವು ವಿಶ್ವ ಯೋಗ ದಿನಾಚರಣೆಯನ್ನು ಬಲಾಯಿ ಪಾದೆಯ ನೂತನ ಸಭಾಂಗಣದಲ್ಲಿ ಆಚರಿಸಿತು. ಯೋಗ ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು.ಅಧ್ಯಕ್ಷರಾದ ಶ್ರೀ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ರಮೇಶ್, ಉಪಾಧ್ಯಕ್ಷರಾದ ಬಿ ಎಸ್ ನಾರಾಯಣ್, ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್,ಮಾಜಿ ಅಧ್ಯಕ್ಷರಾದ ಶಂಕರ್ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಸ್ಥಿತರಿದ್ದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!