ಘಟಕಗಳು

ಎಚ್ ಐ ವಿ ಜತೆ ಬದುಕುವ ಮಕ್ಕಳೊಂದಿಗೆ ಒಂದು ದಿನ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 17.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಗಳನ್ನು ನೀಡಿ ನೊಂದ ಎಳೆ ಮನಸುಗಳಿಗೆ ಸಾಂತ್ವಾನ ನೀಡಿದರು ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಸಿ .ಕರ್ಕೇರ , ಕಾರ್ಯದರ್ಶಿ ರವಿಕಲಾ , ಉಪಾದ್ಯಕ್ಷೆ ಉಮಾ ಶ್ರೀಕಾಂತ್ ,ಕೋಶಾಧಿಕಾರಿ […]

Read More

ಮಹಾಸಭೆ , ಪ್ರತಿಜ್ಞಾವಿಧಿ ಭೋಧನೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ‌ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]

Read More

ಬೆಂಗಳೂರಿನಲ್ಲಿ ಸಮಾಲೋಚನಾ ಸಭೆ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕ ರಚಿಸುವ ಸಲುವಾಗಿ ದಿನಾಂಕ‌ 17.06.2018 ರಂದು ಬೆಂಗಳೂರಿನ ಮಲ್ಲೇಶ್ವರಂ ನ ಗಾಂಧಿ ಸಾಹಿತ್ಯ ಸಂಘದಲ್ಲಿ ಸಮಾಲೋಚನಾ ಸಭೆ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ‌ ಅಧ್ಯಕ್ಷ ಎಮ್.ಸಂಜೀವ ಪೂಜಾರಿ ದೀಪ ಬೆಳಗುವುದರ ಮೂಲಕ ಸಭೆ ಉದ್ಘಾಟಿಸಿದರು. ನೂತನ ತಂಡ ರಚಿಸುವ ಸಂದರ್ಭದಲ್ಲಿ ತನಗೆ ಇಂತಹ ಹುದ್ದೆ ನೀಡಿ‌ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು‌ ಸದಸ್ಯರು ಆತ್ಮವಿಶ್ವಾಸದಿಂದ ಹುದ್ದೆಯನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆ, ಈ ನಿಟ್ಟಿನಲ್ಲಿ ಬೆಂಗಳೂರು ಘಟಕ ಯಶಸ್ವಿಯಾಗುವುದರಲ್ಲಿ ಎರಡು […]

Read More

ಯುವವಾಹಿನಿ ಉಡುಪಿ : ಹಸಿರು ಉಸಿರು ಚಾಲನೆ

. ಉಡುಪಿ‌ : ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಹಸಿರು ಉಸಿರು ಕಾರ್ಯಕ್ರಮಕ್ಕೆ ಉಡುಪಿಯ ಬಲಾಯಿಪಾದೆ ಜಂಕ್ಷನ್ ಬಳಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವವಾಹಿನಿ ಉಡುಪಿ ಘಟಕದ ಸ್ಥಾಪಕಾಧ್ಯಕ್ಷ ಚಂದ್ರಶೇಖರ್ ಉದ್ಯಾವರ ಮಾತನಾಡಿ ನಮ್ಮ ಪಕೃತಿಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರವೇ ನಮ್ಮ ಉಸಿರು, ನಮ್ಮ ಪರಿಸರ ಹಸಿರಾಗಿದ್ದಲ್ಲಿ ಉಸಿರು ಸ್ವಚ್ಚ ವಾಗಿರುತ್ತದೆ. ನಮ್ಮ ಪರಿಸರ ಸಮೃದ್ಧ ಗೊಳಿಸಿ ನಮ್ಮ ಮುಂದಿನ ಪೀಳಿಗೆಗೆ ನಾವೂ ಉತ್ತಮ ಕೊಡುಗೆ ನೀಡೋಣ ಎಂದು ಕರೆ […]

Read More

ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ) ಪುತ್ತೂರು ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಹರೀಶ್ ಶಾಂತಿ ಉಪಾಧ್ಯಕ್ಷರು : ಪ್ರಶಾಂತ್ ಪಲ್ಲತ್ತಡ್ಕ ಕಾರ್ಯದರ್ಶಿ : ಅನೂಪ್ ಜತೆ ಕಾರ್ಯದರ್ಶಿ : ನಾರಾಯಣ್ ಕುರಿಕ್ಕಾರ್ ಕೋಶಾಧಿಕಾರಿ : ರವೀಂದ್ರ ಪೂಜಾರಿ ಸಂಪ್ಯ ಸಂಘಟನಾ ಕಾರ್ಯದರ್ಶಿ : ಅಣ್ಣಿ ಪೂಜಾರಿ,  ಗಣೇಶ್ ಬೊಳ್ಳಗುಡ್ಡೆ,  ರಕ್ಷಿತ್ ನರಿಮೊಗರು, ಬಾಲಸುಬ್ರಮಣ್ಯ ಬಲ್ನಾಡು, ಹರೀಶ್ ರಾಗೀದಕುಮೇರು ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ಸಂತೋಷ್ ಕೆಯ್ಯೂರು ನಾರಾಯಣಗುರು ತತ್ವ ಪ್ರಚಾರ […]

Read More

ಸಾಧನೆಗೆ ಗುರಿಗಿಂತ ಛಲವೇ ಮುಖ್ಯ : ಪರಮೇಶ್ವರ ಪೂಜಾರಿ

ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]

Read More

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ‌ಕಾರ್ಯದಲ್ಲಿ‌ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ‌ ತಿಳಿಸಿದರು. ಅವರು ದಿನಾಂಕ‌ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]

Read More

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]

Read More

ಬಡ ಕುಟುಂಬಕ್ಕೆ ಯುವವಾಹಿನಿ ಆಸರೆ

ಮುಲ್ಕಿ : ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದಾಗಿ ಮುಲ್ಕಿ ಸಮೀಪದ ಕೊಳಚಿಕಂಬ್ಳದ ಕೇಶವ ಪೂಜಾರಿ ಹಾಗೂ ಮೀನಾಕ್ಷಿ ದಂಪತಿಗಳ ಬಡ ಕುಟುಂಬದ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಈ ಮನೆಯಲ್ಲಿ ವಾಸಿಸಲು‌ ಸಾಧ್ಯವಾಗದೆ ಕೇಶವ ಪೂಜಾರಿ ಯವರ ಬಡ ಕುಟುಂಬಕ್ಕೆ ದಿಕ್ಕೇ ತೋಚದಂತಾಯಿತು. ಈ‌ ಸಂದರ್ಭದಲ್ಲಿ ‌ಯುವವಾಹಿನಿ‌ ಮುಲ್ಕಿ ಘಟಕವು ಸುಮಾರು ‌ರೂಪಾಯಿ‌ 60,000/- ವೆಚ್ಚದಲ್ಲಿ ಈ ಮನೆಯನ್ನು ರಿಪೇರಿಗೊಳಿಸಿ‌ ವಾಸಿಸಲು ಯೋಗ್ಯವಾಗುವಂತೆ ಮಾಡಿ ದಿನಾಂಕ‌ ‌15.06.2018 ರಂದು‌ ಮನೆಯನ್ನು ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ […]

Read More

ಹಿರಿಯರ ಸತತ ಪ್ರಯತ್ನ, ದೂರದೃಷ್ಟಿ ಯುವವಾಹಿನಿಯ ಯಶಸ್ಸು : ಯಶವಂತ ಪೂಜಾರಿ

ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!