ಸಾಧನೆ

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ನಮ್ಮ ಮನೆ :- ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ  ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಯುವವಾಹಿನಿ ಭವನ ಉದ್ಘಾಟನೆ

ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]

Read More

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಯುವವಾಹಿನಿಯ ಸಾಧನೆಯ ಮೈಲಿಗಲ್ಲುಗಳು

1987-88  ವಿಜಯದಶಮಿಯ ಶುಭದಿನದಂದು ಸಂಘಟನೆಯ  ಉದಯ (02-10-1987) 1988-89  ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ 1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ  (26-4-1989) 1990-91  ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ. 1991-92  ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ. 1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ. 1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ 1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!