ಸನ್ಮಾನ

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಬೆಳ್ತಂಗಡಿ ಯುವವಾಹಿನಿ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್‌ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಪಡುಬಿದ್ರೆ: ಮಕ್ಕಳ ಹಬ್ಬ ಮತ್ತು ಕಲಾಭೂಷಣ ಪ್ರಶಸ್ತಿ ಪ್ರದಾನ

ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]

Read More

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!