ಇತರೆ

ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’

    ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ  ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]

Read More

ತುಳಸಿ ಪರ್ಬ ಕಾರ್ಯಕ್ರಮ

ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ  […]

Read More

ಮದ್ಯ ಮುಕ್ತ ಮದರಂಗಿ

ಮದ್ಯ ಮುಕ್ತ ಮದರಂಗಿಗೆ ಸಾಕ್ಷಿಯಾಯಿತು ಯುವವಾಹಿನಿ (ರಿ) ವೇಣೂರು ಘಟಕ ವೇಣೂರು ನ. 8 : ಮದ್ಯಪಾನವು ಸಾಮಾಜದ ಸ್ವಾಸ್ಥ್ಯ ದ ವಿನಾಶಕ್ಕೆ ಕಾರಣವಾಗುತ್ತಿದ್ದು,ಇತ್ತೀಜೆಗೆ ಮದುವೆಯ ಮದರಂಗಿಯು ನವಕುಡುಕರನ್ನು ಸೃಷ್ಟಿಸುವ ಸಮಾರಂಭವಾಗಿ ಪರಿವರ್ತನೆಗೊಂಡಿದೆ. ಇದು ಬದಲಾಗಿ ಎಲ್ಲಾ ಕಡೆ ಮದ್ಯಮುಕ್ತ ಮದರಂಗಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗದ ಡಾ। ಯೋಗೀಶ್ ಕೈರೋಡಿ ಹೇಳಿದರು. ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಬಜಿರೆಗ್ರಾಮದ ಹೊಸಮನೆ ಮನೋಜ್ ಪೂಜಾರಿಯವರ ಮನೆಯಲ್ಲಿ ನಡೆದ ಮದ್ಯ ಮುಕ್ತ ಮದರಂಗಿ ಕಾರ್ಯಕ್ರಮದಲ್ಲಿ […]

Read More

ಬೇಸಾಯದ ಕಡೆಗೆ ನಮ್ಮ ನಡೆ

ದಿನಾಂಕ 03/11/2019 ರಂದು ಪೂರ್ವಾಹ್ನ 7.00ಘಂಟೆಗೆ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಇಂದು ನಮ್ಮ ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬಹಳ ಆಸಕ್ತಿದಾಯಕವಾಗಿ ಮತ್ತು ಸಮರ್ಪಣಾ ಭಾವದಿಂದ ನಾಗಂದಡಿಯ ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು. ಕೇವಲ ಒಂದು ಗಂಟೆಯಲ್ಲಿ ಒಂದು ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಪರಿಪೂರ್ಣಗೊಳಿಸಿದೆವು.ಇಂದಿನ ದಿನಗಳಲ್ಲಿ ಯುವ ಜನತೆಯು ಕೃಷಿಯತ್ತ ಒಲವು ಪ್ರದರ್ಶಿಸದ ಈ ಸಮಯದಲ್ಲಿ, ನಮ್ಮ ಘಟಕವು ಯುವಜನತೆಯನ್ನು ಒಗ್ಗೂಡಿಸಿ , ಈ ಕಾರ್ಯಕ್ರಮವನ್ನು […]

Read More

ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ

  ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]

Read More

ಕುಣಿತ ಭಜನೆ ತರಬೇತಿ ಪ್ರಾರಂಭ

  ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.

Read More

ಮದ್ಯಮುಕ್ತ ಮದರಂಗಿ : ಸಂಕಲ್ಪ ಪ್ರತಿಜ್ಞಾ ಬೋಧನೆ

  ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]

Read More

ನಮ್ಮ ಮನೆ ಹಬ್ಬ ದೀಪಾವಳಿ, ಕತ್ತಲಿನಿಂದ ಬೆಳಕಿನೆಡೆಗೆ

ನಮ್ಮ ಮನೆ ಹಬ್ಬ ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಇಂದಿರ ರವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಭಾಷ್ ರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಮಾರ್ಗದರ್ಶಕರಾದ ಗಿರಿಧರ ಸನಿಲ್, ಕಾರ್ಯಕ್ರಮದ ಸಂಚಾಲಕರಾದ ಇಂದಿರ […]

Read More

ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟ

ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಹಾಗೂ ಯುವ ವಾಹಿನಿ(ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಜರುಗುವ “ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟ” ನಿರಂತರವಾಗಿ ನಡೆಯುತ್ತಿದ್ದು, ಇಂದು ದ್ವಿತೀಯ ತರಗತಿಯು ಭಜನಾ ಗುರುಗಳಾದ ಅರುಣ್ ಉಳ್ಳಾಲ್ ರವರಿಂದ ಸಂಜೆ 7.00 ರಿಂದ 8.00 ಗಂಟೆಯ ವರೆಗೆ ಜರಗಿತು. ಗುರುಗಳು ದೀಪಾವಳಿ ಹಬ್ಬದ ಮಹತ್ವವನ್ನು ಹಾಗೂ ಹಿಂದೂ ಪಂಚಾಂಗದ ಬಗ್ಗೆ ಕೆಲವು ಮಾಹಿತಿಗಳನ್ನು ಸಭೆಯಲ್ಲಿ ನೀಡಿದರು. ಭಜನೆಯಲ್ಲಿ ಸ್ವರ ಉಚ್ಛಾರದ ಬಗ್ಗೆ ಇರುವ ಮಹತ್ವಗಳನ್ನು ತಿಳಿಸಿದರು. […]

Read More

ದೀಪಾವಳಿ ಆಚರಣೆ

ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ  ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!