30-10-2019, 4:16 PM
ನಮ್ಮ ಮನೆ ಹಬ್ಬ ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಇಂದಿರ ರವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಭಾಷ್ ರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಮಾರ್ಗದರ್ಶಕರಾದ ಗಿರಿಧರ ಸನಿಲ್, ಕಾರ್ಯಕ್ರಮದ ಸಂಚಾಲಕರಾದ ಇಂದಿರ […]
Read More
30-10-2019, 2:32 AM
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಹಾಗೂ ಯುವ ವಾಹಿನಿ(ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಜರುಗುವ “ಧಾರ್ಮಿಕ ಶಿಕ್ಷಣ ಪದ್ಧತಿ ಹಾಗೂ ಭಜನಾ ತರಬೇತಿ ಕಮ್ಮಟ” ನಿರಂತರವಾಗಿ ನಡೆಯುತ್ತಿದ್ದು, ಇಂದು ದ್ವಿತೀಯ ತರಗತಿಯು ಭಜನಾ ಗುರುಗಳಾದ ಅರುಣ್ ಉಳ್ಳಾಲ್ ರವರಿಂದ ಸಂಜೆ 7.00 ರಿಂದ 8.00 ಗಂಟೆಯ ವರೆಗೆ ಜರಗಿತು. ಗುರುಗಳು ದೀಪಾವಳಿ ಹಬ್ಬದ ಮಹತ್ವವನ್ನು ಹಾಗೂ ಹಿಂದೂ ಪಂಚಾಂಗದ ಬಗ್ಗೆ ಕೆಲವು ಮಾಹಿತಿಗಳನ್ನು ಸಭೆಯಲ್ಲಿ ನೀಡಿದರು. ಭಜನೆಯಲ್ಲಿ ಸ್ವರ ಉಚ್ಛಾರದ ಬಗ್ಗೆ ಇರುವ ಮಹತ್ವಗಳನ್ನು ತಿಳಿಸಿದರು. […]
Read More
29-10-2019, 3:56 PM
ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು […]
Read More
29-10-2019, 2:28 AM
ದಿನಾಂಕ 29/10/2019 ರಂದು ಪೂರ್ವಾಹ್ನ 9.00 ಘಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಘಟಕದ ವತಿಯಿಂದ ಧಾನ್ಯಲಕ್ಮಿ ಮತ್ತು ಗೋವಿನ ಪೂಜೆಯನ್ನು ಫಲ ಪುಷ್ಪಗಳಿಂದ ಅಲಂಕರಿಸಿ,ಫಲವಸ್ತು ಮತ್ತು ಮಂತ್ರಾಕ್ಷೆಗಳನ್ನು ಸಮರ್ಪಿಸಿ ಹಾಗೂ ಹಣತೆ ಹಚ್ಚಿ, ದೀಪ ಪ್ರಜ್ವಲಿಸಿ ಷೊಡೋಪಚಾರಿ ವಿಧಿ ವಿಧಾನಗಳಿಂದ ಮಹಿಳಾ ಸದಸ್ಯರು ಸಾಮೂಹಿಕವಾಗಿ ಮಂತ್ರ ಪಠಿಸಿ, ಆರತಿ ಎತ್ತಿದೆವು. ಅಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದೆವು. ಈ ಮೂಲಕ ನಮ್ಮ ಸದಸ್ಯರೆಲ್ಲರೂ ದೀಪಾವಳಿ ಹಬ್ಬದ ಆಚರಣೆ ಮತ್ತು ಮಹತ್ವದ ಸ್ವ ಅನುಭವ ಪಡೆದೆವು. ಈ […]
Read More
29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More
28-10-2019, 2:26 AM
ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]
Read More
27-10-2019, 2:39 AM
ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]
Read More
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More
22-10-2019, 4:28 AM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು, ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು. […]
Read More
21-10-2019, 4:21 AM
ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್ಲಿಂಗ, ಅಹಮದಾಬಾಧ್ ನಗರ, […]
Read More