ಇತರೆ

ಆಘಾತದ ಚಿಕಿತ್ಸೆಗೆ ಸಹಕರಿಸಿದ ಯುವವಾಹಿನಿ(ರಿ) ಮಾಣಿ ಘಟಕ

ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ‌ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ  ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]

Read More

ಸ್ವ ಉದ್ಯೋಗ ತರಬೇತಿ ಶಿಬಿರ

ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]

Read More

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]

Read More

ಯುವವಾಹಿನಿ(ರಿ.) ಬಜಪೆ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]

Read More

ಉಚಿತ ‌ನೇತ್ರ‌ ತಪಾಸಣಾ ಶಿಬಿರ

ಮೂಡಬಿದಿರೆ‌ : ಮಂಗಳೂರು ‌ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ‌ನೇತ್ರ‌ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…

Read More

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಹದಿಹರೆಯದ ಮಕ್ಕಳ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು : ಡಾ.ಅರುಣಾ ಯಡಿಯಾಳ್

ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]

Read More

ಮಹಿಳೆಯರ ಸ್ವಾಭಿಮಾನದ ನಡೆಗೆ ವೇದಿಕೆ ನೀಡಿ : ಪಾರ್ವತಿ ಅಮೀನ್

ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]

Read More

ಯುವವಾಹಿನಿ (ರಿ ) ಕೊಲ್ಯ ಘಟಕದ ಪದಗ್ರಹಣ ಸಮಾರಂಭ : 2019-20

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]

Read More

ಯುವವಾಹಿನಿ ಕುಟುಂಬದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ

ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!