ಇತರೆ

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಯುವವಾಹಿನಿ(ರಿ) ಮಾಣಿ ಘಟಕದ ಸದಸ್ಯರ ವಾತ್ಸಲ್ಯ ಪಯಣ…ಸ್ನೇಹ ಸಿಂಚನ-2019

ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭ

ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ವೈದ್ಯಕೀಯ ಶಿಬಿರ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]

Read More

ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು

ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]

Read More

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]

Read More

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]

Read More

ಬಾಂಧವ್ಯ ಬೆಸುಗೆ -2019

ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ  ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!