01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
01-11-2017, 7:49 AM
ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]
Read More
22-10-2017, 4:15 PM
ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]
Read More
18-10-2017, 5:13 PM
ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]
Read More
18-10-2017, 4:48 PM
ಪುರಾಣ ಕಾಲದ ಬಲಿ ಚಕ್ರವರ್ತಿಯು ಭರತ ಭೂಮಿಯ ಕೃಷಿ ಕ್ಷೇತ್ರದ ಯಜಮಾನನಾಗಿದ್ದನು. “ಕೃಷಿತೋ ನಾಸ್ತಿ ದುರ್ಭಿಕ್ಷಂ” ಎಂಬುದು ಎರಡನೇ ಮನುವಾದ ಸ್ವಾರೋಚಿಷನ ಕಾಲದಲ್ಲಿ ವಿಶ್ವದ ಪ್ರಥಮ ಕೃಷಿಕನಾದ ಆದಿಮನಿಂದ ಹುಟ್ಟಿಕೊಂಡು ಬಲಿರಾಜನ ಕಾಲದಲ್ಲಿ ಸಂಪೂರ್ಣ ಪ್ರಗತಿಯನ್ನು ಕಂಡಿತು. ಇದರ ನಿಮಿತ್ತವಾಗಿಯೇ ಒಂದು ಕಾಲದ ತುಳುನಾಡಿನ ರೈತರು ತಮ್ಮ ಬೇಸಾಯದ ಗದ್ದೆಗಳ ಹುಣಿಗಳಲ್ಲಿ ಸಾಲು ಸಾಲಾಗಿ ದೀಪಗಳನ್ನುರಿಸಿ, ಬಲಿರಾಜನನ್ನು ಸಾಂಕೇತಿಕವಾಗಿ ಪ್ರತಿಷ್ಠಾಪಿಸಿ ದೀಪಾವಳಿಯನ್ನು ಆಚರಿಸುತ್ತಿದ್ದರು ಎಂದು ಖ್ಯಾತ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ|| ದೇಜಪ್ಪ ದಲ್ಲೋಡಿ ತಿಳಿಸಿದರು […]
Read More
18-10-2017, 2:22 PM
ಪರಸ್ಪರ ದೀಪಗಳಿಂದ ಬೆಸೆದುಕೊಂಡು ಕತ್ತಲೆಯಿಂದ ಬೆಳಕಿನೆಡೆಗೆ ಒಂದು ಅಲೌಕಿಕ ಬೆಳಕಿನ ಚಿತ್ತಾರವನ್ನು ಪೂರ್ತಿ ಬಿಡಿಸಿದಂತೆ ಕಾಣುವ ಅಥವಾ ಅದನ್ನು ಅನುಭವಿಸುವ ಅವಕಾಶವಿರುವುದು ದೀಪಗಳ ಹಬ್ಬಕ್ಕೆ ಮಾತ್ರ, ತುಳುನಾಡಿನಲ್ಲಿ ತುಡಾರ ಪರ್ಬಕ್ಕೆ ವಿಶೇಷ ಮಹತ್ವ ಇದೆ. ಕುಟುಂಬದಲ್ಲಿ ಬಾಂಧವ್ಯವನ್ನು ಗಟ್ಟಿಗೊಳಿಸುವ ಶಕ್ತಿ ಹಬ್ಬಗಳಿಗಿದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು. ಅವರು ದಿನಾಂಕ 18.10.2017 ರಂದು ಉಪ್ಪಿನಂಗಡಿ ರಾಜ್ ಮಹಲ್ ಪೆದಮ್ಮಲೆ ( ವರದ್ರಾಜ್ ನಿವಾಸ) ಇಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಜರುಗಿದ ತುಡಾರ […]
Read More
08-10-2017, 4:16 AM
ರಕ್ತದಾನ ಮಹಾದಾನ ಶ್ರೇಷ್ಠ ದಾನ ,ಇದು ಮಾನವೀಯತೆಯ ಪ್ರತೀಕ ,ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ , ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುವವಾಹಿನಿ ಮಾಣಿ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ತಿಳಿಸಿದರು. ಯುವವಾಹಿನಿ (ರಿ) ಮಾಣಿ ಮತ್ತು ಬಂಟ್ವಾಳ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆ ರಕ್ತನಿಧಿ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, […]
Read More
03-10-2017, 8:31 AM
ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]
Read More
02-10-2017, 2:54 AM
ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]
Read More
01-10-2017, 12:33 PM
ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]
Read More