20-11-2016, 6:02 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 5:58 AM
ಯುವವಾಹಿನಿಯ ಪ್ರತಿಷ್ಠಿತ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ’ಡೆನ್ನನ ಡೆನ್ನನ’ ಕಾರ್ಯಕ್ರಮವು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸಿದ ಯುವವಾಹಿನಿ (ರಿ) ಬೆಳ್ತಗಂಡಿ ಘಟಕದ ಸರ್ವ ಸದಸ್ಯರು.
Read More
10-11-2016, 10:26 AM
ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.
Read More
01-11-2016, 10:31 AM
ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]
Read More
30-10-2016, 6:01 AM
ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]
Read More
30-10-2016, 5:28 AM
ದಿನಾಂಕ 30-10-2106 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಮ್ಮ ಮನೆ ಹಬ್ಬ ದೀಪಾವಳಿ ಎಂಬ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮವು ಘಟಕದ ಸದಸ್ಯ ಭಾಸ್ಕರ್ ಕೋಟ್ಯಾನ್ರವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ ಘಟಕದ ಅಧ್ಯಕ್ಷ ಐ. ಸುಜಿತ್ರಾಜ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಭಾಸ್ಕರ್ ಕೋಟ್ಯಾನ್ರವರ ಹೆತ್ತವರಾದ ಸದಾಶಿವ ಅಮೀನ್ ಮತ್ತು ಶ್ರೀಮತಿ ಜಾನಕಿ ಇವರ ಉಪಸ್ಥಿತಿಯಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿತೇಶ್ ಎಕ್ಕಾರ್ ಇವರು ದೀಪಾವಳಿ ಹಬ್ಬದ […]
Read More
23-10-2016, 5:38 AM
ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]
Read More
05-10-2016, 5:48 AM
ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]
Read More
18-09-2016, 5:19 AM
ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]
Read More
18-09-2016, 5:04 AM
ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]
Read More