04-11-2012, 7:05 AM
ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]
Read More
04-11-2012, 6:28 AM
ಕರಾವಳಿ ಕಂಡ ಧೀಮಂತ ಪ್ರತಿಭಾಶಾಲಿಗಳ ಸಾಲಿನ ಮಿನುಗು ನಕ್ಷತ್ರವಾದ ವಿಶುಕುಮಾರ್ ದಂತಕತೆಯಾದ ವ್ಯಕ್ತಿ. ತುಳುವಿನ ಉಸಿರು, ಕನ್ನಡದ ಶಕ್ತಿ, ಸಮಾಜದ ಸ್ಫೂರ್ತಿ, ಚೆಲುವಿನ ಮೂರ್ತಿಯಾಗಿದ್ದ ವಿಶುಕುಮಾರ್ ಒಂದು ಕಾಲದ ಪ್ರತಿಭಾವಂತ ನಟ, ನಿರ್ದೇಶಕ, ಕಾದಂಬರಿಕಾರ, ಪತ್ರಕರ್ತ, ಸಂಘಟಕ, ಸಿನಿಮಾ ನಿರ್ದೇಶಕರಾಗಿ, ಶ್ರೇಷ್ಠ ಸಾಧನೆಗಳನ್ನು ಮಾಡಿದವರು, ಇನ್ನೆಷ್ಟೋ ಉಪಯುಕ್ತ ಕೊಡುಗೆಗಳನ್ನು ನೀಡಲಿರುವ ಭರವಸೆಯ ಅಕಾಲದಲ್ಲೇ ಅಗಲಿ ಹೋದವರು. 1797 ರಲ್ಲಿ ಟಿಪ್ಪುಸುಲ್ತಾನ್ ಸಮರ ಕಾಲದಲ್ಲಿ ಮಂಗಳೂರು ಬೋಳೂರಿನ ಕಡಲತೀರದಲ್ಲಿ ಕಟ್ಟಿಸಿದ ಕೋಟೆ ಸುಲ್ತಾನ್ ಬತ್ತೇರಿ, ಇಂದು ಪ್ರವಾಸಿಗರ ರಮ್ಯ ತಾಣ, […]
Read More
04-11-2012, 6:25 AM
ಅಧ್ಯಯನ ವಿಶುಕುಮಾರ್ ಕಾಲವಾಗಿ (1989) ಇದೀಗ 26 ವರ್ಷಗಳು ಪೂರ್ಣವಾಗುತ್ತಿದೆ. ಆದರೆ ಅವರು ಬಿಟ್ಟು ಹೋದ ಸಾಹಿತ್ಯ ಕೃತಿಗಳು, ನಾಟಕ, ಸಿನೆಮಾಗಳು ಇಂದಿಗೂ ನಮ್ಮನ್ನು ಕಾಡಿಸುತ್ತವೆ; ಯೋಚನೆಗೆ ಹಚ್ಚುತ್ತವೆ. ವಿಶುಕುಮಾರ್ ತಮ್ಮ ಕೃತಿಗಳಲ್ಲಿ ಆಯ್ದುಕೊಂಡ ವಸ್ತುಗಳು, ಸಾಮಾಜಿಕ ಸಮಸ್ಯೆಗಳು, ಸಂಘರ್ಷಗಳು, ಇವತ್ತಿಗೂ ಪ್ರಸ್ತುತವೆನಿಸುತ್ತವೆ. ವಿಶುಕುಮಾರ್ ಭಿನ್ನವಾಗಿ ಆಲೋಚಿಸುವ ಮನೋಧರ್ಮದವರು. ಹಾಗಾಗಿ ಕೆಲವೊಮ್ಮೆ ಅವರು ವಿವಾದಾತ್ಮಕ ವ್ಯಕ್ತಿಯೂ ಆದರು. ಒಬ್ಬ ವ್ಯಕ್ತಿ ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಯಶಸ್ಸನ್ನು, ಪ್ರಸಿದ್ಧಿಯನ್ನು ಪಡೆಯುವುದನ್ನು ನಾವು ಕಾಣುತ್ತೇವೆ. ಆದರೆ ವಿಶುಕುಮಾರ್ ತಾವು ಪ್ರವೇಶಿಸಿದ ಎಲ್ಲಾ […]
Read More
04-11-2012, 6:23 AM
ಸ್ಥಿತಿ-ಗತಿ – ವಿಶುಕುಮಾರ್ (1979 ರಲ್ಲಿ ಬೆಳ್ತಂಗಡಿ ಬಿಲ್ಲವ ಸಂಘವು ಹೊರತಂದ ’ಕೋಟಿ- ಚೆನ್ನಯ’ ಎಂಬ ಸ್ಮರಣ ಸಂಚಿಕೆಯಲ್ಲಿ ಪ್ರಕಟಗೊಂಡ ಖ್ಯಾತ ಸಾಹಿತಿ ದಿ| ವಿಶುಕುಮಾರ್ ಅವರ ಇಂದಿಗೂ ಪ್ರಸ್ತುತವೆನಿಸುವ ಒಂದು ಲೇಖನ…) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಜನಾಂಗಕ್ಕೆ ಬಿಲ್ಲವ, ಪೂಜಾರಿ, ಬೈದ, ಹಳೇಪೈಕ ಇತ್ಯಾದಿ ಹೆಸರುಗಳು. ಉತ್ತರ ಕನ್ನಡದಲ್ಲಿ ನಾಮಧಾರಿಗಳು. ಶಿವಮೊಗ್ಗ, ಸಾಗರ ಕಡೆ ದೀವರು. ಹಳೇ ಮೈಸೂರು ಕಡೆ ಈಡಿಗರು. ಗುಲ್ಬರ್ಗ, ಬೀದರ್ ಕಡೆ ಈಳಿಗರು, ಕೇರಳದಲ್ಲಿ ತೀಯಾ, ತಮಿಳ್ನಾಡಿನಲ್ಲಿ ನಾಡಾರ್ ಹೀಗೆ ಬೇರೆ […]
Read More
04-11-2012, 6:19 AM
ವಿಶ್ವಗುರು ಬಸವಣ್ಣನವರಿಗೂ ಸೇಂದಿ ಮಾರುವ ಕುಲಕಸುಬಿನವರಿಗೂ ಎತ್ತಣ ಸಂಬಂಧವಯ್ಯಾ? ಸಹಜ ಪ್ರಶ್ನೆಯೇ, ೧೨ನೆಯ ಶತಮಾನದಲ್ಲಿ ಜಗತ್ತೇ ಬೆರಗುಗೊಳ್ಳುವ ರೀತಿಯಲ್ಲಿ ಸಮಾಜೋ ಧಾರ್ಮಿಕ ಕ್ರಾಂತಿಗೆ ರೂವಾರಿಯಾದ ಬಸವಣ್ಣ ಸ್ಥಾಪಿತ ಅನುಭವ ಮಂಟಪದಲ್ಲಿ ಸೇಂದಿ ಮಾರುವ ಶರಣನೊಬ್ಬನಿದ್ದ. ಹೆಸರು ಹೆಂಡದ ಮಾರಯ್ಯ. ಬಸವಣ್ಣನವರ ಸತ್ಸಂಗದ ನಂತರ ಶರಣ ಪಟ್ಟವನ್ನಲಂಕರಿಸಿದ ಮಾರಯ್ಯ ನವರು ’ಶರಣ ಹೆಂಡದ ಮಾರಯ್ಯ’ ಎಂದು ನಾಮಾಂಕಿತರಾದರು. ಅಸಮಾನತೆ ಸಾರುವ, ಮನುಷ್ಯರನ್ನು ಉಚ್ಛ-ನೀಚ ಎಂಬುದಾಗಿ ವಿಭಜಿಸುವ ಅಂದಿನ ಸಮಾಜದಲ್ಲಿ ದೀನ ದಲಿತರು, ತುಳಿತಕ್ಕೊಳಗಾದವರು. ಶೋಷಣೆಯಲ್ಲಿ ಮುಳುಗಿದ ವರ ಅಂತಃಕರಣದಲ್ಲಿ […]
Read More
04-11-2012, 6:15 AM
ಕರ್ನಾಟಕ ರಾಜ್ಯ ಭಾರತದ ಒಂದು ಅಂಗ. ಈ ರಾಜ್ಯದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ’ತುಳುನಾಡೆಂದೇ’ ಪ್ರಖ್ಯಾತಿ. ಅರಬ್ಬೀ ಸಮುದ್ರದ ತಡಿಯಿಂದ ಪಶ್ಚಿಮ ಘಟ್ಟಗಳ ತುದಿಯ ತನಕ ಹಬ್ಬಿಕೊಂಡಿರುವ ಕೃಷಿ ಪ್ರಧಾನವಾದ, ಪ್ರಾಕೃತಿಕ ಚೆಲುವಿನ ಹಸಿರನ್ನು ತುಂಬಿಸಿಕೊಂಡ ಶ್ರೀಮಂತ ಜಿಲ್ಲೆ. ತುಂಬಿ ಹರಿಯುತ್ತಿರುವ ನದಿಗಳು, ಜಗತ್ಪ್ರಸಿದ್ಧ ಪುಣ್ಯ ಕ್ಷೇತ್ರಗಳು, ಇಂತಹ ಸುಂದರ ನಾಡಿನಲ್ಲಿ ಗೇಣಿದಾರನಾಗಿ, ಒಕ್ಕಲಾಗಿ, ಮೂರ್ತೆದಾರನಾಗಿ, ಕಾರ್ಮಿಕನಾಗಿ, ದೈವಗಳ ಪೂಜಾರಿಯಾಗಿ ಬದುಕಿ ಬಾಳಿದ ಬಹು ದೊಡ್ಡ ಜನ ಸಮುದಾಯ ಬಿಲ್ಲವರದ್ದು. ಶೋಷಣೆ, ದಬ್ಬಾಳಿಕೆ, ಜೀತ ಪದ್ಧತಿಯ […]
Read More
04-11-2012, 6:10 AM
ತುಳುನಾಡಿನ ಬಿಲ್ಲವ ಸಮಾಜ ಪ್ರಾಚೀನತೆಯಲ್ಲಿ, ಜನ ಸಂಖ್ಯೆಯಲ್ಲಿ, ಗುತ್ತು ಬರ್ಕೆ, ಭಾವ, ನಟ್ಟಿಲ್ಗಳ ಸ್ಥಾನಮಾನದೊಂದಿಗೆ ಆಳರಸರ ದಂಡನಾಯಕರಾಗಿ ಕ್ಷಾತ್ರ ತೇಜದಲ್ಲಿ ಮೆರೆದ ಸಮಾಜವಾಗಿತ್ತು. ಕಾಲಕ್ರಮೇಣ ಅಧೋಗತಿಗಿಳಿದು ಅಸ್ಪೃಶ್ಯತೆ ಶೋಷಣೆಗಳ ಹೊಡೆತದಿಂದ ಜರ್ಜರಿತವಾದ ಈ ಸಮಾಜ 1908 ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ತುಳುನಾಡಿಗೆ ಪಾದಾರ್ಪಣೆ ಮಾಡಿ ಕುದ್ರೋಳಿ ಗೋಕರ್ಣನಾಥನ ಸ್ಥಾಪನೆ ಮಾಡಿದ ಮೇಲೆ ಸಮಾಜ ಅಭಿವೃದ್ಧಿಯ ಕಡೆ ಮುಖ ಮಾಡಿತು. ಅನಕ್ಷರಸ್ಥರಾಗಿ, ಇತರರ ಮೋಸದಿಂದ ಎಲ್ಲವನ್ನು ಕಳಕೊಂಡ ಈ ಸಮಾಜ ಶಿಕ್ಷಣದ ಮಹತ್ವವನ್ನು ತಿಳಿದು ಶಿಕ್ಷಣವನ್ನು ತಮ್ಮ […]
Read More
04-11-2012, 6:05 AM
ಬಿಲ್ಲವರ ಚರಿತ್ರೆಯ ಗುತ್ತು, ಬರ್ಕೆ, ಗುರಿಕಾರ ಮನೆತನಗಳ ಕುರಿತ ಅಧ್ಯಯನವು ಕಳೆದ 2-3 ವರ್ಷಗಳಿಂದ ಮುಂಬಯಿ ’ಗುರುತು’ ಮಾಸಿಕ ಸಂಪಾದಕ, ಸಂಶೋಧಕ ಶ್ರೀ ಬಾಬು ಶಿವ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಾ ಬಂದಿದೆ. ಬಿ.ಎಂ.ರೋಹಿಣಿ, ಮುದ್ದು ಮೂಡುಬೆಳ್ಳೆ ಹಾಗೂ ರಮಾನಾಥ್ ಕೋಟೆಕಾರ್ರ ತಂಡ ಕ್ಷೇತ್ರಾಧ್ಯಯನ ನಡೆಸುತ್ತಾ ಬಂದಿದೆ. ಅದರಲ್ಲಿ ಒಂದು ಗುತ್ತುಮನೆ ಅಧ್ಯಯನದ ಮಾದರಿ ಇಲ್ಲಿದೆ: ಸಾಂತ್ಯ ಗುತ್ತು ಸಾಂತ್ಯ ಬಂಟ್ವಾಳ ತಾಲೂಕಿನಲ್ಲಿದೆ. ಬಿ.ಸಿ.ರೋಡ್, ಪುತ್ತೂರು ಮಾರ್ಗದಲ್ಲಿ ಮಾಣಿ ಕಳೆದು, ಕರುವೇಲ್ಲ್ಲಿ ಶಾಲಾ ಬಳಿ ಉತ್ತರದ ಮಣ್ಣಿನ ರಸ್ತೆಯಲ್ಲಿ ಮುಂದುವರಿದು […]
Read More
04-11-2012, 5:45 AM
ಯುವವಾಹಿನಿ ಸಂಘಟನೆಯು ಅಮೃತವಾಹಿನಿಯಾಗಿ ಹರಿಯುತ್ತಾ ಬಂದು ಇದೀಗ ರಜತ ಮಹೋತ್ಸವಕ್ಕೆ ಕಾಲಿರಿಸಿದ ಈ ಶುಭ ಸಮಯದಲ್ಲಿ ನನ್ನ ಮನದಾಳದ ಮಾತನ್ನು ಅಕ್ಷರ ರೂಪದಲ್ಲಿ ಬರೆಯುವಾಗ ಮನತುಂಬಿ ನಿಲ್ಲುತ್ತದೆ. ಉಕ್ಕೇರುವ ಸಂತಸದಿಂದ ಲೇಖನಿ ಒಂದು ಕ್ಷಣ ನಿಂತು ಮತ್ತೆ ಮುನ್ನಡೆಯುತ್ತಿದೆ. ಅಂದರೆ ಸಂಘಟನೆ ಒಂದು ಸಾಮಾಜಿಕ ಶಕ್ತಿ ಹೌದು. ಆದರೆ ಒಂದು ಸಂಘಟನೆ ಇಪ್ಪತ್ತೈದು ವರ್ಷದ ಯೌವನಕ್ಕೆ ಕಾಲಿರಿಸುವುದೆಂದರೆ ಅದು ಅಷ್ಟು ಸುಲಭದ ಮಾತೇನೂ ಅಲ್ಲ. ಅಷ್ಟೊಂದು ಸಾಮಾಜಿಕ ಚಿಂತನೆಯ ಮನಸ್ಸು, ನಿಷ್ಠೆ, ಒಗ್ಗಟ್ಟು, ಆತ್ಮಬಲ, ಮಾನವೀಯ ಗುಣ […]
Read More
04-11-2012, 5:24 AM
ಆಧುನಿಕತೆಯನ್ನು ನಾವು ಪರಿಭಾವಿಸುವ ಬಗೆಯೇ ಸಂಕೀರ್ಣವಾದುದು. ಆಧುನಿಕತೆ ಎಂದರೇನು ಎಂಬುದನ್ನು ವ್ಯಾಖ್ಯಾನದ ಚೌಕಟ್ಟಿನ ಒಳಗೆ ತರುವ ಪ್ರಯತ್ನ ಚಿಂತಕ ವಲಯದಲ್ಲಿ ಸಾಕಷ್ಟು ನಡೆದಿವೆ. ಸರಳವಾಗಿ ನಾವು ’ಆಧುನಿಕತೆ’ ಎಂಬ ಪರಿಕಲ್ಪನೆಯನ್ನು ಗ್ರಹಿಸುವಾಗ ವರ್ತಮಾನದಲ್ಲಿ ನಡೆಯುತ್ತಿರುವ ಸ್ಥಿತ್ಯಂತರಗಳು, ಪಲ್ಲಟಗಳು ನಮ್ಮ ಅರಿವಿಗೆ ಬರುತ್ತವೆ. ಆದರೆ ವಿಶಾಲವಾದ ಅರ್ಥದಲ್ಲಿ ’ಆಧುನಿಕತೆ’ ಎಂಬುದು ಎಲ್ಲಾ ಕಾಲಕ್ಕೂ ಸಂಬಂಧಿಸಿದ್ದು. ಕಲ್ಲಿನಿಂದ ಬೆಂಕಿಯ ಸೃಷ್ಠಿಯ ಸಾಧ್ಯತೆಯನ್ನು ಗುರುತಿಸಿದ್ದೂ ಒಂದು ಕಾಲದ ಆಧುನಿಕತೆಯಾಗಿದೆ. ಚಕ್ರದ ಸೃಷ್ಟಿಯಂತೂ ಆಧುನಿಕತೆಯ ಮೂಲ ಬೇರು. ಜೈವಿಕ ವಿಕಾಸದ ಜೊತೆಗೆ ಬೌದ್ಧಿಕ […]
Read More