ಸಮಾಜ ಸೇವೆ

ಯುವಾಹಿನಿ (ರಿ) ಕುಪ್ಪೆಪದವು ಘಟಕದ ವತಿಯಿಂದ ಅಶಕ್ತರಿಗೆ ನೆರವು

ಕುಪ್ಪೆಪದವು : ಕುಪ್ಪೆಪದವು ಗ್ರಾಮದ ದೊಡ್ಡಳಿಕೆ ಎಂಬ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮೆರಡು ಕಣ್ಣುಗಳನ್ನು ಕಳೆದುಕೊಂಡು ದುಡಿಯಲು ಅಶಕ್ತರಾಗಿರುವ ಅಲ್ಲದೆ ಆರ್ಥಿಕವಾಗಿ ದುರ್ಬಲ ಪರಿಸ್ಥಿತಿಯಲ್ಲಿರುವ ಸೀತಾರಾಮ ಪೂಜಾರಿಯವರ ಮಗಳ ಮದುವೆಗಾಗಿ ಕುಪ್ಪೆಪದವು ಘಟಕದ ಮಹಿಳೆಯರ ವತಿಯಿಂದ ದಿನಾಂಕ 08-11-2018 ರಂದು 50 ಕೆ ಜಿ ಅಕ್ಕಿ, ಉಪಾದ್ಯಕ್ಯರು ಅಜಯ್ ಅಮೀನ್ ರವರು ವೈಯಕ್ತಿಕವಾಗಿ 50 ತೆಂಗಿನಕಾಯಿ ಹಾಗೂ ಇತರ ಪದಾಧಿಕಾರಿಗಳು ಸದಸ್ಯರ ವತಿಯಿಂದ ರೂಪಾಯಿ ಐದು ಸಾವಿರ ನಗದನ್ನು ಅಧ್ಯಕ್ಷರು, ಉಪಾದ್ಯಕ್ಯರು, ಕಾರ್ಯದರ್ಶಿ, ಎಲ್ಲಾ ಸದಸ್ಯರು ಪದಾಧಿಕಾರಿಗಳ […]

Read More

ಬೆಳಕಿನ ಹಬ್ಬದಲ್ಲಿ ನಮ್ಮ ನಡೆ ಬೇಸಾಯದ ಕಡೆ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ದಿನಾಂಕ 08-11-2018 ರಂದು ಬೆಳಿಗ್ಗೆ 9.00 ಗಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ, ನಮ್ಮ ನಡೆ ಬೇಸಾಯದ ಕಡೆ ಎಂಬ ಚಿಂತನೆಯಲ್ಲಿ ಪ್ರಾರಂಭವಾಗಿ ನಾಗಂಡದಿಯ ಗದ್ದೆಯಲ್ಲಿ ನಿರೀಕ್ಷಿತ ಸಮೃದ್ಧ ಬತ್ತದ ಫಸಲನ್ನು ಪಡೆದು, ದಾನ್ಯಲಕ್ಮಿ ಮತ್ತು ಗೋ ಮಾತೆಯ ಪೂಜೆಯನ್ನು ಷೋಡೋಪಚಾರಿ ವಿದಿ ವಿಧಾನಗಳಿಂದ ಮಹಿಳೆಯರ ನೇತೃತ್ವದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡು ಈ ಧಾರ್ಮಿಕ ಸಂಪ್ರದಾಯದ ಮೂಲಕ ಯಶಸ್ವಿಯಾಗಿ ನಡೆಸಿಕೊಟ್ಟರು. ಅಲ್ಲದೆ ಕೃಷಿ […]

Read More

ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ

ಕೂಳೂರು : ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ‘ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ’ ಯನ್ನು ದಿನಾಂಕ 06/11/2018 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಘಟಕದ ಕುಟುಂಬ ಸಂಪರ್ಕ ನಿರ್ದೇಶಕರಾದ ರೇಣುಕಾ ತಾರನಾಥ್ ಅವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ 90 ಮಂದಿ ಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ […]

Read More

ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಜೀವನದಲ್ಲಿ ಪರಿಶ್ರಮ ಇರಲಿ : ಡಾ.ಸದಾನಂದ ಪೂಜಾರಿ

ವೇಣೂರು : ಜೀವನದಲ್ಲಿ ಏನಾದರೊಂದು ಸಾಧಿಸಬೇಕು, ಅದಕ್ಕೆ ವೈದ್ಯರು, ಇಂಜಿನಿಯರುಗಳೇ ಆಗಬೇಕೆಂದಿಲ್ಲ, ಕೃಷಿಕನಾಗಿಯೂ ಉತ್ತಮ ಸಾಧನೆ ಮಾಡಬಹುದು. ಪರಿಶ್ರಮ ಇದ್ದರೆ ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ತಿಳಿಸಿದರು. ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ದಿನಾಂಕ ರಂದು ಜರುಗಿದ ಯುವವಾಹಿನಿ (ರಿ) ವೇಣೂರು ಘಟಕದ ಯುವವಾಹಿನಿ ಸೇವಾ ಯೋಜನೆ ಆಸರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು ಯುವವಾಹಿನಿ […]

Read More

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯಾತ್ರೆಯಲ್ಲಿ ಪಾನೀಯ ಸೇವೆ

ಮಂಗಳೂರು : ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 19.10. 2018 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಕೊಲ್ಯ ಪರಿಸರದಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ

ಕೊಲ್ಯ : ರೋಟರಿ ಕ್ಲಬ್ ಮಂಗಳೂರು ಪೂರ್ವ,ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ,ಎನಿಮಲ್ ಕೇರ್ ಟ್ರಸ್ಟ್ ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಜಂಟಿ ಸಹಭಾಗಿತ್ವದಲ್ಲಿ ” ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ” ವನ್ನು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ದಿನಾಂಕ 07/10/2018 ನೇ ಆದಿತ್ಯವಾರದಂದು ಜರಗಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರಾದ ರೋ| ಜ?? ಕುಮಾರ್ ಕೊಲ್ಯರವರು ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಳೆದ ಹದಿನಾಲ್ಕು ವರುಷಗಳೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು […]

Read More

ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅಭಿಯಾನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕ ಮತ್ತು ಕೂಳೂರು ಪ್ರೌಢಶಾಲೆ ಇವರ ಜಂಟಿ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 02/10/2018 ರಂದು ಕೂಳೂರು ಪ್ರೌಢಶಾಲೆ ಇಲ್ಲಿ ಬೆಳಗ್ಗೆ 9.30 ಕ್ಕೆ ಸರಿಯಾಗಿ ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೂಳೂರು ಚರ್ಚಿನ ಫಾ.ವಿನ್ಸೆಂಟ್ ಡಿಸೋಜಾ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಕೂಳೂರು ಘಟಕದ ಸಲಹೆಗಾರರು ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!