ಸಮಾಜ ಸೇವೆ

ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಸಸಿಹಿತ್ಲು : ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 30.09.2018ರಂದು ಬೆಳಿಗ್ಗೆ 9ರಿಂದ 12ಗಂಟೆಯವರೆಗೆ  ಸ್ವಚ್ಛತಾ ಕಾರ್ಯವು ಬ್ರಹ್ಮಶ್ರೀ ನಾರಯಾಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಶೈಲೇಶ್ ಕುಮಾರ್ ಸಸಿಹಿತ್ಲು, ಕಾರ್ಯದರ್ಶಿ ವೀಣಾ ಅಮೀನ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Read More

ಯುವವಾಹಿನಿ ಸೇವಾ ಯೋಜನೆಗೆ ಚಾಲನೆ

ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]

Read More

ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ತಾ23.09.2018 ರಂದು ಬೆಳಿಗ್ಗೆ 8.ರಿಂದ 10 ರ ತನಕ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಕಾಡಕೇರಿ ಕ್ರಾಸ್ ತನಕ ಸ್ವಚ್ಛತಾ ಕಾರ್ಯಕ್ರಮವು .ಘಟಕ ಅಧ್ಯಕ್ಷರಾದ ಅರುಣ್ ಕುಮಾರ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸೇರಿದಂತೆ ಒಟ್ಟು 52 ಸದಸ್ಯರು ಕೈಜೋಡಿಸಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು…

Read More

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ರಸ್ತೆ ದುರಸ್ತಿ

ಬೆಳುವಾಯಿ : ಬೆಳುವಾಯಿ ಪೇಟೆಯಲ್ಲಿ ಮಳೆಗಾಲದಲ್ಲಿ ನೀರು ರಸ್ತೆಗೆ ಹರಿದು ರಸ್ತೆಯ ಬದಿಯಲ್ಲಿ ಕೆಲವು ಕಡೆ ಎರಡು ಅಡಿಯಷ್ಟು ದೊಡ್ಡ ಹೊಂಡ ಸೃಷ್ಟಿಯಾಗಿತ್ತು. ಇದರಿಂದ ಸಾರ್ವಜನಿಕರು., ವಾಹನ ಚಾಲಕರು ತೀರಾ ತೊಂದರೆ ಅನುಭವಿಸುತ್ತಿದ್ದರು. ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ಜೆಸಿಬಿ ಮೂಲಕ ಈ ಹೊಂಡಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಬೆಳುವಾಯಿ ಘಟಕದ ಈ ಸಮಾಜಮುಖಿ ಕಾಳಜಿಗೆ ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬೆಳುವಾಯಿ ಘಟಕದ […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ವೈದ್ಯಕೀಯ ನೆರವು

ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ವೈದ್ಯಕೀಯ ನೆರವು

ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Read More

ಶ್ರೀ ಗುರು ಪ್ರಸಾದಾಲಯ ಲೋಕಾರ್ಪಣೆ

ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]

Read More

ವಿಶೇಷ ಚೇತನ ಮಕ್ಕಳ ಜತೆ ಗುರುಜಯಂತಿ ಆಚರಣೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]

Read More

ವೃದ್ಧಾಶ್ರಮದಲ್ಲಿ ಒಂದು ದಿನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 27/08/2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ 32 ಸದಸ್ಯರನ್ನೊಳಗೊಂಡ ತಂಡವು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮಂಗಳೂರು ನಗರ ಪ್ರದೇಶದಲ್ಲಿರುವ ‘ವಾತ್ಸಲ್ಯಧಾಮ’ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಆಶ್ರಮದಲ್ಲಿದ್ದ ೩೫ ವೃದ್ದರ ಜತೆ ಸೇರಿ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಹಾಡು, ಆಟೋಟ, ಮನರಂಜನಾ ಕಾರ್ಯಕ್ರಮಗಳ ಮೂಲಕ ಆಶ್ರಮವಾಸಿಗಳಿಗೆ ಸ್ಪೂರ್ತಿ ತುಂಬಿದರು. ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನದಂದು ಅವರ ಮುಖ್ಯ ತತ್ತ್ವವಾದ ‘ಒಂದೇ ಜಾತಿ ಒಂದೇ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!