18-09-2016, 5:19 AM
ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]
Read More
07-09-2016, 5:12 AM
ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.
Read More
14-08-2016, 5:47 AM
ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]
Read More
12-08-2016, 5:40 AM
ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.
Read More
30-07-2016, 5:42 AM
ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.
Read More
18-07-2016, 8:18 AM
ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]
Read More
12-06-2016, 6:00 AM
ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್ಸ್ & ಕೆಟರರ್ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್ಸ್ & ಕೆಟರರ್ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]
Read More
15-11-2015, 12:56 PM
ಬಂಟ್ವಾಳ ತಾಲೂಕಿನ ನಾವೂರು ಹಳೆಗೇಟು ಬಳಿ ಗುರುವಾರ ರಾತ್ರಿ ಅಮಾಯಕ ಯುವಕ ಹರೀಶ್ ಪೂಜಾರಿಯನ್ನು ಹತ್ಯೆ ಮಾಡಿರುವುದು ಕ್ರೂರ ಹಾಗೂ ಸಹಿಸಲಸಾಧ್ಯವಾದ ಉಗ್ರ ಕೃತ್ಯ ಹಾಗೂ ಅಮಾಯಕ ಹರೀಶ್ ಪೂಜಾರಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದ್ದಾರೆ. ದಿನಾಂಕ 15-11-2015 ನೇ ಆದಿತ್ಯವಾರದಿಂದ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸುಮಾರು 40 ಸದಸ್ಯರು ಮೃತ ಹರೀಶ ಪೂಜಾರಿ ಮನೆಗೆ ತೆರಳಿ ಸಾಂತ್ವಾನ […]
Read More